ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ, ಬೆಂ.ಗ್ರಾ.ಜಿಲ್ಲೆ:
ಲಾವಣ್ಯ ವಿದ್ಯಾಸಂಸ್ಥೆಯಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವಿಶ್ವಾಸ್ ಹನುಮಂತೇಗೌಡ ರವರು ಈ ದಿನದಂದು ಗುರುಹಿರಿಯರನ್ನ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

- Advertisement - 

ಇಂದಿನ ಯುವಕರೆಮುಂದಿನ ಭವಿಷ್ಯದ ಬಾವಿ ಪ್ರಜೆಗಳು ಆದುದರಿಂದ ಯುವಕರು ಗುರುಹಿರಿಯರ ಬಗ್ಗೆ ಗೌರವವಿರಬೇಕು ಎಂದು ಹೇಳಿದರು. ಪ್ರಾಂಶುಪಾಲ ಎಂ ಸಿ ಮಂಜುನಾಥ್ ಮಾತನಾಡಿ ಹಿಂದೂ ಬೌದ್ಧ ಮತ್ತು ಜೈನ ಧರ್ಮಗಳಲ್ಲಿ ಗುರುಪೂರ್ಣಿಮೆ ಆಚರಣೆ ಮಾಡಲಾಗುತ್ತದೆ ಈ ದಿನವನ್ನು ವೇದವ್ಯಾಸರ ಜಯಂತಿಯನ್ನಾಗಿಯು ಸಹ ಆಚರಿಸಲಾಗುತ್ತದೆ ಎಂದು ಹೇಳಿದರು.

- Advertisement - 

 ಕಾರ್ಯಕ್ರಮದಲ್ಲಿ  ಬಿಎಡ್ ಕಾಲೇಜು ಪ್ರಾಂಶುಪಾಲ ಜಿ ಕೃಷ್ಣಮೂರ್ತಿ ಕನ್ನಡ ಉಪನ್ಯಾಸಕರಾದ ಪರಿಮಳ ಮಾತನಾಡಿದರು. 

     ಆಡಳಿತ ಮಂಡಳಿಯವರು ಗುರುಪೂರ್ಣಿಮೆ ಪ್ರಯುಕ್ತ ಎಲ್ಲಾ ಉಪನ್ಯಾಸಕರು ಶಿಕ್ಷಕರನ್ನು ಗೌರವಿಸಿದರು ಸಮಾರಂಭದಲ್ಲಿ ಎಲ್ಲಾ ಉಪನ್ಯಾಸಕರು ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

- Advertisement - 

Share This Article
error: Content is protected !!
";