ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ವಿದ್ಯಾರ್ಥಿಗಳು ಜಮ್ಮುವಿನಿಂದ ಸುರಕ್ಷಿತವಾಗಿ ತವರಿಗೆ ಮರಳಲು ನೆರೆವಾದ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ಜಮ್ಮು- ಕಾಶ್ಮೀರದಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕೈಗೊಂಡ ಹಿನ್ನೆಲೆ ಜಮ್ಮುವಿನಲ್ಲಿ ಓದುತ್ತಿರುವ ಕರ್ನಾಟಕದ ವಿದ್ಯಾರ್ಥಿಗಳು ಆತಂಕದಲ್ಲಿ ಕಾಲ ಕಳೆಯುತ್ತಿದ್ದರು.
ಈ ವೇಳೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತು ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ವಿಶೇಷ ಮುತುವರ್ಜಿ ವಹಿಸಿ ಆ ಎಲ್ಲಾ ವಿದ್ಯಾರ್ಥಿಗಳನ್ನು ಶ್ರೀನಗರದಿಂದ ಸುರಕ್ಷಿತವಾಗಿ ದೆಹಲಿಗೆ ಕರೆತಂದು, ಅವರವರ ಊರಿಗೆ ತಲುಪಲು ಎಲ್ಲ ರೀತಿಯ ವ್ಯವಸ್ಥೆ ಮಾಡಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.