ಅಬಕಾರಿ ಇಲಾಖೆಯಲ್ಲಿ ಭಾರೀ ಲಂಚ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಲ್ಮೀಕಿ ನಿಗಮ, ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಮದ್ಯದಂಗಡಿಗಳಿಂದ ಮಂಥ್ಲಿ ಮನಿ
ಹೆಸರಿನಲ್ಲಿ ಲಂಚ ಪಡೆಯುತ್ತಿರುವ ಬಗ್ಗೆ  ಆರೋಪ ಕೇಳಿ ಬಂದಿದ್ದು ಈ ಸುದ್ದಿ ವೈರಲ್ ಆಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ಹಾಕಿರುವ ವಿಪಕ್ಷ ನಾಯಕ ಆರ್‌.ಅಶೋಕ್‌, ಅಬಕಾರಿ ಇಲಾಖೆ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೂಂದು ಕರಾಳ ಅಧ್ಯಾಯ ಬಹಿರಂಗಗೊಂಡಿದ್ದು, ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ಮಂಥ್ಲಿ ಮನಿ ಹೆಸರಿನಲ್ಲಿ ಮದ್ಯದ ಅಂಗಡಿಗಳಿಂದ ಪ್ರತಿ ತಿಂಗಳಿಗೆ 15 ಕೋಟಿ ರೂಪಾಯಿಯಂತೆ ವರ್ಷಕ್ಕೆ 180 ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಅಬಕಾರಿ ಸಚಿವರನ್ನು ಬದಲಾಯಿಸಲು ಕೋರಿದ್ದಾರೆ.

ವರ್ಗಾವಣೆ ದಂಧೆ, ಲೈಸೆನ್ಸ್ ಮಂಜೂರಾತಿ, ಮದ್ಯದ ಅಂಗಡಿಗಳಿಂದ ಮಂಥ್ಲಿ ಮನಿ ಸೇರಿದಂತೆ ಅಬಕಾರಿ ಸಚಿವರು ವರ್ಷಕ್ಕೆ ಸುಮಾರು 500 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘ ಮಾಡಿರುವ ಆರೋಪ ಅತ್ಯಂತ ಗಂಭೀರವಾಗಿದ್ದು,

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಈ ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಿ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಆರ್‌.ಅಶೋಕ್‌ಪೋಸ್ಟ್‌ಹಾಕಿ ಟೀಕಿಸಿದ್ದಾರೆ.

 

 

Share This Article
error: Content is protected !!
";