ಕೋಟೆನಾಡಿಗೆ ಭರ್ಜರಿ ಎಂಟ್ರಿ ಕೊಟ್ಟ ಹಿಂದೂ ಮಹಾ ಗಣಪತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಷ್ಠಾಪನೆಯಾಗಲಿರುವ ಹಿಂದೂ ಮಹಾ ಗಣಪತಿ ಬುಧವಾರ ಪುರ ಪ್ರವೇಶಿಸಿತು.
ನಗರದ ಹೊರವಲಯದಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದಿಂದ ಮೆರವಣಿಗೆ ಮೂಲಕ ಹೊರಟ ಹಿಂದೂ ಮಹಾ ಗಣಪತಿ ಹೆದ್ದಾರಿಯಿಂದ ಚಳ್ಳಕೆರೆ ಗೇಟ್ ಮೂಲಕ ಪಂಚಾಚಾರ್ಯ ಕಲ್ಯಾಣ ಮಂಟಪ ಪಕ್ಕದಲ್ಲಿರುವ ಪೆಂಡಾಲ್‌ಗೆ ಆಗಮಿಸಿತು.

- Advertisement - 

ಕೇಸರಿ ಭಾವುಟ, ಜೈಶ್ರೀರಾಮ್ ಎಂದು ಬರೆದಿದ್ದ ಹನುಮನ ಭಾವಚಿತ್ರವುಳ್ಳ ಭಾವುಟಗಳು, ಶಾರದಾ ಬ್ರಾಸ್ ಬ್ಯಾಂಡ್‌ನ ವಾದ್ಯ ಮೆರವಣಿಗೆಯಲ್ಲಿ ರಾರಾಜಿಸಿದವು. ನೂರಾರು ಬೈಕ್‌ಗಳಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ಕುಣಿದು ಕುಪ್ಪಳಿಸಿದರು.

- Advertisement - 

ಚಳ್ಳಕೆರೆ ಗೇಟ್‌ನಲ್ಲಿ ಡೊಳ್ಳು, ತಮಟೆ ಮೂಲಕ ಹಿಂದೂ ಮಹಾ ಗಣಪತಿಯನ್ನು ಬರಮಾಡಿಕೊಳ್ಳಲಾಯಿತು.ಗರುಡನ ಮೇಲೆ ವಿರಾಜಮಾನವಾಗಿರುವ ಹಿಂದೂ ಮಹಾಗಣಪತಿಯನ್ನು ವೀಕ್ಷಿಸಲು ಸಹಸ್ರಾರು ಜನ ಜಮಾಯಿಸಿದ್ದರು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರು ಹಿಂದೂ ಮಹಾ ಗಣಪತಿ ಪುರ ಪ್ರವೇಶದಲ್ಲಿ ಭಾಗವಹಿಸಿದ್ದರು.  

- Advertisement - 
Share This Article
error: Content is protected !!
";