ಹಿಂದೂ ವ್ಯಕ್ತಿ, ಮುಸ್ಲಿಂ ಮಹಿಳೆಯ ಅಕ್ರಮ ಸಂಬಂಧದ ವಿರುದ್ಧ ನೈತಿಕ ಪೊಲೀಸ್ ಗಿರಿ ನಡೆಸಿದ ಪುಂಡರು

News Desk

ಚಂದ್ರವಳ್ಳಿ ನ್ಯೂಸ್, ರಾಮನಗರ:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಸ್ವಕ್ಷೇತ್ರ ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು
ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರನ್ನು ಬಂಧಿಸಿದ್ದಾರೆ.
ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನವಾಜ್
, ಕಬೀರ್, ಸುಯೋಲ್, ನಯಾಜ್ ಮತ್ತು ಮಹಿಳೆ ಬಂಧಿತ ಆರೋಪಿಗಳಾಗಿದ್ದಾರೆ. 

ಎರಡು ಪ್ರತ್ಯೇಕ ಎಫ್​ಐಆರ್-?
ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಹಿಂದೂ ಧರ್ಮದ ವ್ಯಕ್ತಿ ಹಾಗೂ ಮುಸ್ಲಿಂ ಮಹಿಳೆ ಮೇಲೆ ಆರೋಪಿಗಳು ನೈತಿಕ ಪೊಲೀಸ್ ಗಿರಿ ನಡೆಸಿ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಇಂದಿರಾನಗರದಲ್ಲಿ ನಡೆದಿತ್ತು.

- Advertisement - 

ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಹೇಶ್ ಹಾಗೂ ಹಸೀನಾ ಬಾನು ಎನ್ನುವ ಇಬ್ಬರ ತಲೆ ಬೋಳಿಸಿ ಹಲ್ಲೆ ಮಾಡಿ ಆರೋಪಿಗಳು ಅಟ್ಟಹಾಸ ಮೆರೆದಿದ್ದರು. ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೃತ್ಯವೆಸಗಲಾಗಿದೆ. ತಕ್ಷಣ ಹಲ್ಲೆಗೊಳಗಾದವರನ್ನು ರಕ್ಷಣೆ ಮಾಡಿ ಪೊಲೀಸ್ ಠಾಣೆಗೆ ಕರೆ ತರಲಾಗಿತ್ತು. ಮಹೇಶ್ ಹಾಗೂ ಹಸೀನಾ ಬಾನು ದೂರಿನ ಅನ್ವಯ ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲಾ ಎಸ್​.ಪಿ ಶ್ರೀನಿವಾಸ್ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿ, ಹಲ್ಲೆಗೆ ಒಳಗಾಗಿರುವ ಇಬ್ಬರು ಪರಸ್ಪರ ಪ್ರೀತಿಸುತ್ತಿರುತ್ತಾರೆ. ಇದನ್ನ ಸಹಿಸಲು ಆಗದೇ ಮಹಿಳೆ ಕಡೆಯವರು ಕರೆತಂದು ಹಲ್ಲೆ ನಡೆಸಿ ತಲೆ ಬೋಳಿಸಿದ್ದಾರೆ ಎಂದು ತಿಳಿಸಿದ್ದಾರೆ.

- Advertisement - 

ಆರೋಪಿಗಳು ನಡೆಸಿರುವ ನೈತಿಕ ಪೊಲೀಸ್ ಗಿರಿ ವಿರುದ್ಧ ತಕ್ಷಣ ಕ್ರಮ ತೆಗೆದುಕೊಂಡಿದ್ದೇವೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನ ಬಂಧಿಸಲಾಗಿದೆ. ಎರಡು ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Share This Article
error: Content is protected !!
";