ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷರಾಗಿ ಎಚ್.ಕೆ.ಪ್ರಾಣೇಶ್ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಕೆ.ಪ್ರಾಣೇಶ್
, ಗೌರವಾಧ್ಯಕ್ಷರಾಗಿ ಸದಾಶಿವಪ್ಪ, ಉಪಾಧ್ಯಕ್ಷರಾಗಿ ಇರ್ಫಾನ್, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಶ್ರೀನಿವಾಸ್, ಖಜಾಂಚಿಯಾಗಿ ಉಮೇಶ್ ಎಲ್. ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಭೆಯಲ್ಲಿ ಇವರುಗಳನ್ನು ಅವಿರೋಧ ಆಯ್ಕೆ ಮಾಡಲಾಯಿತು. ನಂತರ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

- Advertisement - 

- Advertisement - 

 

Share This Article
error: Content is protected !!
";