ಗೃಹ ಸಚಿವ ಪರಮೇಶ್ವರ್ ಕೈಗಳನ್ನ ಕಟ್ಟಿ ಹಾಕಲಾಗಿದೆ

News Desk

ಚಂದ್ರವಳ್ಳಿ ನ್ಯೂಸ್, ಬೀದರ್:
ಕರಾವಳಿಯಾದ್ಯಂತ ಸೇರಿದಂತೆ ಮಂಗಳೂರಿನಲ್ಲಿ ಕೇವಲ ಹಿಂದೂ ಹಾಗೂ ಮುಸ್ಲಿಮರಷ್ಟೇ ಇಲ್ಲ
, ಎಲ್ಲ ಧರ್ಮದವರೂ ವಾಸವಾಗಿದ್ದಾರೆ. ಎಲ್ಲರೂ ಶಾಂತಿಯಿಂದ ಬದುಕುವುದು ಮುಖ್ಯ ಎಂದು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು.

- Advertisement - 

ಬೀದರ್‌ನಲ್ಲಿ ಭಾನುವಾರ ಮಾತನಾಡಿದ ಸೋಮಣ್ಣ ಅವರು, ಗೃಹ ಸಚಿವ ಡಾ.ಜಿ ಪರಮೇಶ್ವರ್ ತುಂಬಾ ಒಳ್ಳೆಯವರು. ಹಿಂದಿನಿಂದಲೂ ಅವರ ಬಗ್ಗೆ ಗೊತ್ತಿದೆ. ಆದರೆ, ಅವರ ಕೈಗಳನ್ನು ಕಟ್ಟಿ ಹಾಕಲಾಗಿದೆ. ಅವರಿಗೆ ಏನೇನು ಒತ್ತಡಗಳಿದ್ದಾವೆಯೋ ಗೊತ್ತಿಲ್ಲ ಎಂದು ಸೋಮಣ್ಣ ತಿಳಿಸಿದರು.

- Advertisement - 

ಸೋಮಣ್ಣನವರ ಕೈ ಕಟ್ಟಿ ಹಾಕಿರುವುದರಿಂದಾಗಿ ಪರಿಸ್ಥಿತಿ ಹೀಗಾಗಿದೆ. ಕಾಂಗ್ರೆಸ್ ಪಕ್ಷದವರಿಗೆ ಆಡಳಿತ ಮಾಡಲು ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಮೇಶ್ವರ್ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ. ಅವರಿಗೆ ಸರಿಯಾಗಿ ಕೆಲಸ ಮಾಡಲು ಬಿಡಬೇಕು ಎಂದು ಸೋಮಣ್ಣ ತಾಕೀತು ಮಾಡಿದ್ದಾರೆ.

- Advertisement - 
Share This Article
error: Content is protected !!
";