ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡ ಬೆಳವಂಗಲ ಹೋಬಳಿ ಮಧುರನಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.
ಸಭೆಯಲ್ಲಿ ಆಯವ್ಯಯ ಮಂಡನೆ ಮಾಡಲಾಯಿತು. ಅತಿ ಹೆಚ್ಚು ಹಾಲು ಹಾಗೂ ಗುಣಮಟ್ಟದ ಹಾಲು ಸರಬರಾಜು ಮಾಡಿದ ಸದಸ್ಯರಿಗೆ ಪ್ರಥಮ ದ್ವಿತೀಯ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಧುರನಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಡಿ. ನಾಗರಾಜು, ಉಪಾಧ್ಯಕ್ಷ ಪಿ.ತ್ಯಾಗರಾಜು, ಬೆಂಗಳೂರು ಹಾಲು ಒಕ್ಕೂಟದ ವಿಸ್ತರಣಾ ಅಧಿಕಾರಿ ಕುಮಾರಿ ಕೆ.ಕುಸುಮ, ಮುಖ್ಯ ಕಾರ್ಯನಿರ್ವಾಹಕ ಎಂ.ಉಮೇಶ್, ಗ್ರಾ.ಪಂ. ಸದಸ್ಯೆ ಶಿಲ್ಪ.ಜಿ, ಕಾರ್ಯಕಾರಿ ಮಂಡಳಿ ಸದಸ್ಯರು, ಹಾಗೂ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹಾಜರಿದ್ದರು

