ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಅವರ ಶೈಕ್ಷಣಿಕ ಮತ್ತು ವೈಜ್ಞಾನಿಕ ಸೇವೆಗೆ, ಬೆಂಗಳೂರಿನ ಸಮರ್ಥ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ ರಾಜ್ಯ ಪ್ರಶಸ್ತಿಗೆ ಸ್ವಾಮಿ ಭಾಜನರಾಗಿದ್ದಾರೆ.
ಜುಲೈ 6 ರ ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯ ಕಸಾಪ ವೇದಿಕೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಸಮರ್ಥ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಎಸ್.ಆರ್.ವಿಜಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.