ಹುಬ್ಬಳ್ಳಿ ಗಲಭೆ ಪ್ರಕರಣ, ಬಿಜೆಪಿಯವರ ಹೋರಾಟಗಳು ನಿರಾಧಾರ- ಮುಖ್ಯಮಂತ್ರಿ

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement - 

ಅವರು ಇಂದು ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು.

- Advertisement - 

 ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು.

ಅಂತೆಯೇ ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.

- Advertisement - 

 

 

 

Share This Article
error: Content is protected !!
";