ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ನನ್ನ ಬಳಿ ಬೇರೇನು ಆಯ್ಕೆಗಳಿವೆ? ನಾನು ಸಿದ್ದರಾಮಯ್ಯ ಜತೆ ನಿಲ್ಲಬೇಕು. ಅವರನ್ನು ಬೆಂಬಲಿಸಬೇಕು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನದಾಳದ ಮಾತುಗಳು.
5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಂದಿಗಿರಿಧಾಮದಲ್ಲಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಲಕ್ಷಾಂತರ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ತರಲು ಶ್ರಮ ಪಟ್ಟಿದ್ದಾರೆ. ಅವರ ಬಗ್ಗೆ ಯೋಚಿಸಬೇಕಿದೆ ಎಂದರು.

