ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಸುಧಾರಿತ ಈರುಳ್ಳಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಜುಲೈ-3
ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಸಹ ಪ್ರಾಧ್ಯಪಕ(ತರಕಾರಿ) ಡಾ. ಪ್ರಕಾಶ್ ಕೆರೂರೆ ಇವರು ಈರುಳ್ಳಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಮಾಹಿತಿ ನೀಡುವರು.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟ ಶಾಸ್ತ್ರಜ್ಞ ಡಾ ಟಿ ರುದ್ರಮುನಿ ಇವರು ಈರುಳ್ಳಿ ಬೆಳೆಯಲ್ಲಿ ಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.

- Advertisement - 

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಈರುಳ್ಳಿ ತಾಕಿಗೆ ಕ್ಷೇತ್ರ ಭೇಟಿಯನ್ನು ಮಾಡಲಾಗುವುದು. ಆಸಕ್ತ 50 ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಲು ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ. ಆರ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮೊದಲು ನೋಂದಾವಣಿ ಮಾಡಿಕೊಂಡ 50 ರೈತಭಾಂದವರು ಫ್ರೂಟ್ಸ್ ಐಡಿ (ಎಫ್ಐಡಿ) ಅಥವಾ ಆಧಾರ್ ಕಾರ್ಡನೊಂದಿಗೆ ತರಬೇತಿಗೆ ಹಾಜರಾಗಲು ಅವರು ವಿನಂತಿಸಿದ್ದಾರೆ.

- Advertisement - 

 

Share This Article
error: Content is protected !!
";