ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಗಂಟಲಿಗೆ ಇಡ್ಲಿ ಸಿಲುಕಿ ವ್ಯಕ್ತ ಸಾವು

News Desk

ಪಾಲಕ್ಕಾಡ್ (ಕೇರಳ):
ಇಡ್ಲಿ ತಿನ್ನುವ ಸ್ಪರ್ಧೆ ಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯೋರ್ವರ ಗಂಟಲಲ್ಲಿ ಇಡ್ಲಿ ಸಿಲುಕಿ, ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಅಲಮರಾಮ್ ಎಂಬ ಪ್ರದೇಶದಲ್ಲಿ ನಡೆದಿದೆ.

- Advertisement - 

ಕಂಜಿಕೋಡು ಗ್ರಾಮದ ನಿವಾಸಿ, ಲಾರಿ ಚಾಲಕ ಸುರೇಶ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಓಣಂ ಹಬ್ಬದ ಪ್ರಯುಕ್ತ ಚಟ್ನಿ, ಸಾಂಬರ್ ಇಲ್ಲದೆ ಬರೀ ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು.

- Advertisement - 

 ಒಟ್ಟು ನಾಲ್ವರು ಸ್ಪರ್ಧಾಳುಗಳಲ್ಲಿ, ಸುರೇಶ್ ಅವರು ಕೂಡ ಓರ್ವರಾಗಿದ್ದರು. ಇತರೆ ಸ್ಪರ್ಧಾಳುಗಳ ರೀತಿಯಲ್ಲಿ ಸುರೇಶ್ ಅವರು ಕೂಡ, ಸ್ಪರ್ಧೆಯಲ್ಲಿ ಜಯ ಸಾಧಿಸಬೇಕೆಂಬ ಉಮೇದಿನಲ್ಲಿ ಗಡಿಬಿಡಿಯಲ್ಲಿ ಇಡ್ಲಿ ತಿನ್ನಲಾರಂಭಿಸಿದ್ದಾರೆ.

 ಒಂದೇ ಬಾರಿ ಅವರು ಮೂರು ಇಡ್ಲಿಗಳನ್ನು ಬಾಯಲ್ಲಿ ಹಾಕಿಕೊಂಡಿದ್ದು, ಈ ವೇಳೆ ಅವರ ಗಂಟಲಲ್ಲಿ ಇಡ್ಲಿಯೊಂದು ಸಿಲುಕಿ ಬಿದ್ದಿದೆ. ಉಸಿರಾಡಲು ಕಷ್ಟಪಡಲಾರಂಭಿಸಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಉಪಚರಿಸಿ, ವಾಹನವೊಂದರಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement - 

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Share This Article
error: Content is protected !!
";