ಚಂದ್ರವಳ್ಳಿ ನ್ಯೂಸ್, ರಾಮನಗರ:
ಚನ್ನಪಟ್ಟಣದಲ್ಲಿ ಗೆಲ್ಲಬೇಕಾದರೆ ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ತಿಳಿಸಿದರು.
ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಲ್ಲಿ ಯಾರೇ ಗೆದ್ದರೂ ಕೂದಲೆಳೆಯ ಅಂತರದಲ್ಲಿ ಫಲಿತಾಂಶ ಬರಬಹುದು. ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ ಕೆಲಸ ಬಹಳಷ್ಟು ವರ್ಕೌಟ್ ಆಗಿದೆ ಎಂದು ಹೇಳಿದರು.
ಜಮಿರ್ ಅಹಮ್ಮದ್ ಖಾನ್ ಕರಿಯಾ ಕುಮಾರಸ್ವಾಮಿ ಹೇಳಿಕೆಗೂ ಅವರು ಗೂಡಾರ್ಥದಲ್ಲಿ ಮಾತನಾಡಿದರು.
ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಅರ್ಪಿಸುತ್ತೇನೆ.
ಸಿಎಂ, ಡಿಸಿಎಂ, ಸಚಿವರು, ಡಿ.ಕೆ.ಸುರೇಶ್ಗೆ ಧನ್ಯವಾದ ಹೇಳುತ್ತೇನೆ. ದೇವೇಗೌಡರು ಮೊಮ್ಮಗ ಗೆಲ್ಲಲೇಬೇಕೆಂದು ಹೋರಾಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಮಬಲದ ಹೋರಾಟ ಅಂತಾ ಅನ್ಸುತ್ತೆ. ಕೆಲವರ ಮಾತುಗಳು ಜನರ ಭಾವನೆಗೆ ಘಾಸಿ ಆಗಿದೆ ಅನ್ನಿಸುತ್ತೆ.
ಸಚಿವ ಜಮೀರ್ ಮಾತಿನಿಂದ ಮುಸ್ಲಿಮರಿಂದ ಸ್ವಲ್ಪ ಮತ ಬಂದ್ರೂ ನನಗೆ ಬರಬೇಕಿದ್ದ ಒಕ್ಕಲಿಗ ಮತಗಳು ಬಂದಿಲ್ಲ ಅನ್ನಿಸುತ್ತೆ ಎಂದು ಅಸಮಾಧಾನ ಹೊರಹಾಕಿದರು.
ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್ ಕೆಲಸ ಬಹಳಷ್ಟು ವರ್ಕೌಟ್ ಆಗಿದೆ. ನಾವೇ ಇಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕಟ್ಟಿದ್ದೇವೆ. ಇದುವರೆಗೂ ತೆಗೆದುಕೊಂಡಿರುವ ಗರಿಷ್ಠ ಮತಗಳು 85 ಸಾವಿರ. ಈ ಚುನಾವಣೆ ಗೆಲ್ಲಬೇಕಾದರೆ 1 ಲಕ್ಷ ಮತ ತೆಗೆದುಕೊಳ್ಳಬೇಕು. ಸೋತಿದ್ದೇನೆ ಅಂತಾ ಅಲ್ಲ, ಇಲ್ಲಿ ಸಮಬಲದ ಹೋರಾಟ ಇದೆ.
ಒಕ್ಕಲಿಗ ಮತ ಕ್ರೋಢೀಕರಣ ಆಗಿದ್ದರೆ ಫಲಿತಾಂಶ ಮೇಲೆ ಪರಿಣಾಮ ಬೀರಲಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಆರ್ಭಟ ಜೋರಾಗಿತ್ತು.
ಅವರ ಸಮುದಾಯದ ಜನರು ಕ್ಷೇತ್ರದಲ್ಲಿದ್ದು ಕೆಲಸ ಮಾಡಿದರು. ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್, ನಾನು ಒಕ್ಕಲಿಗನಾಗಿದ್ದರೂ ನಮ್ಮ ಜನ ಇನ್ನೂ ಅವರಿಗೆ ಅಂಟಿಕೊಂಡು ಕೂತಿದ್ದಾರೆ ಎಂದು ಸಿಪಿ ಯೋಗೇಶ್ವರ್ ಹೇಳಿದರು.
ಗೆದ್ದರೆ ಕಾಂಗ್ರೆಸ್ ಯೋಜನೆ, ಕೆಲಸ ಮಾಡಿದೆ ಅಂತಾ ಅಂದುಕೊಳ್ಳಬೇಕು. ಸೋತರೆ ಪಕ್ಷಾಂತರ ಕಾರಣಕ್ಕೆ ಜನ ಸೋಲಿಸಿದ್ದಾರೆ ಅಂದುಕೊಳ್ಳಬೇಕು. ಜಮೀರ್ ಅಹ್ಮದ್ ಹೇಳಿಕೆಯನ್ನು ವೈಯಕ್ತಿಕವಾಗಿ ಖಂಡಿಸುತ್ತೇನೆ. ಪ್ರತಿಯೊಬ್ಬ ನಾಯಕನ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಬೇಸರ ಹೊರಹಾಕಿದರು.