ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕೋನೆeನಹಳ್ಳಿ ಗ್ರಾಮದಲ್ಲಿ ಶ್ರೀ ಚೇಳೂರಮ್ಮ ದೇವಾಲಯದ ಪ್ರತಿಷ್ಠಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 14 ಮತ್ತು 15ರಂದು ಭಕ್ತಿಭಾವದಿಂದ ನೆರವೇರಿತು.
ದೇವಾಲಯದ ಮುಖ್ಯ ಅತಿಥಿಗಳಾಗಿ ಎಲೆರಾಂಪುರ ಮಠದ ಡಾ. ಹನುಮಂತನಾಥ ಸ್ವಾಮೀಜಿ ಭಾಗವಹಿಸಿ ಆಶೀರ್ವಾಚನ ನೀಡಿ ಶುಭ ಹಾರೈಸಿದರು.
ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು.ಗ್ರಾಮದ ಅಭಿವೃದ್ಧಿ, ಧಾರ್ಮಿಕ ಏಕತೆ ಹಾಗೂ ಭಕ್ತಿಭಾವ ಹೆಚ್ಚಿಸಲು ಈ ದೇವಾಲಯ ಪ್ರಮುಖ ಕೇಂದ್ರವಾಗಲಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ನಂತರ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಗಣಪತಿ ಪೂಜೆ, ಕಲಶ ಸ್ಥಾಪನೆ, ಹೋಮ-ಹವನ, ಮಹಾಪೂಜೆ ಹಾಗೂ ಮಂಗಳಾರತಿ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎಲೆರಾಂಪುರ ಮಠದ ಡಾ. ಹನುಮಂತನಾಥ ಸ್ವಾಮೀಜಿ, ಮಾಜಿ ಶಾಸಕರಾದ ವೆಂಕಟರಮಣಯ್ಯ, ಭರತ್ ಬೋಯಲಹಳ್ಳಿ, ಹರೀಶ್ ಬೋಯಲಹಳ್ಳಿ, ಚೌಡಯ್ಯ ಕೆ, ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್, ರುದ್ರಮೂರ್ತಿ, ಹಾಲಿ ಪಂಚಾಯತ್ ಸದಸ್ಯರು ಹಾಗೂ ಮಾಜಿ ಪಂಚಾಯತ್ ಅಧ್ಯಕ್ಷೆ ಕೆ.ವೈ.ದೀಪಿಕಾ ರುದ್ರಮೂರ್ತಿ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

