ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದ ಭಾರತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಪರೇಷನ್ ಸಿಂಧೂರದ ಮೂಲಕ ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿ
, ಉದ್ದೇಶಿತ ಗುರಿ ಸಾಧನೆಗೈದ ಕಾರ್ಯಶೈಲಿಗೆ ಜಾಗತಿಕ ರಕ್ಷಣಾ ವಿಶ್ಲೇಷಕರು ಶ್ಲಾಘಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ‌.

ಭಾರತವು ಪಾಕಿಸ್ತಾನದ ಉಗ್ರನೆಲೆಗಳು, ವಾಯುನೆಲೆ ಮತ್ತಿತರ ಕಡೆ ಯೋಜಿತ ದಾಳಿ ನಡೆಸಿತು. ಆದರೆ, ಪಾಕಿಸ್ತಾನಕ್ಕೆ ಭಾರತದ ಒಂದೇ ಒಂದು ನೆಲೆ ಮೇಲೆ ದಾಳಿ ನಡೆಸಲು ಆಗಲಿಲ್ಲ. ಇದು ಭಾರತಕ್ಕೆ ಸಿಕ್ಕ ಸ್ಪಷ್ಟ ಜಯ ಎಂದು ಜಾಗತಿಕ ಯುದ್ಧ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 ಪಾಕಿಸ್ತಾನದಲ್ಲಿನ ಯಾವುದೇ ಗುರಿ ಮೇಲೆ ದಾಳಿ ಮಾಡಬಲ್ಲ ಸಾಮರ್ಥ್ಯವನ್ನು ಭಾರತ ಪ್ರದರ್ಶಿಸಿತು. ಈ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಗೆ ಹೊಸತೊಂದು ಎಚ್ಚರಿಕೆಯನ್ನು ರವಾನಿಸಿದೆ ಎಂದು ರಕ್ಷಣಾ ತಜ್ಞರು ವಿಶ್ಲೇಷಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

 

Share This Article
error: Content is protected !!
";