ಸೂರಿಗಾಗಿ ಸಮರ ಸಾರಿದ ಭಾರತ ಕಮ್ಯುನಿಸ್ಟ್ ಪಕ್ಷ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಘಟಕದಿಂದ ಸೂರಿಗಾಗಿ ಸಮರ ನಗರಸಭೆ ಎದುರು ಸೋಮವಾರ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಮನವಿ ಸಲ್ಲಿಸಲಾಯಿತು.

ನಗರದ ದಾವಣಗೆರೆ ರಸ್ತೆಯಲ್ಲಿರುವ ಕಮ್ಯುನಿಸ್ಟ್ ಕಾರ್ಯಾಲಯದಿಂದ ಮೆರವಣಿಗೆ ಮೂಲಕ ನಗರಸಭೆಗೆ ಆಗಮಿಸಿದ ಪ್ರತಿಭಟನಾಕಾರರು ಬಡವರಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಮಾತನಾಡಿ ನಗರದಲ್ಲಿ ನಿವೇಶನ, ಮನೆಗಳಿಲ್ಲದೆ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರು ಜೀವಿಸುವುದು ಕಷ್ಟವಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ವಸತಿಗಾಗಿ ಹೋರಾಟ ನಡೆಸಿದ ಪ್ರತಿಫಲವಾಗಿ ರಾಜ್ಯದ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಸರ್ವೆ ನಡೆಸಿ ನಿವೇಶನ ಮನೆ ಇಲ್ಲದವರನ್ನು ಗುರುತಿಸುವಂತೆ ರಾಜ್ಯದ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದರು.

ಕಮ್ಯುನಿಸ್ಟ್ ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಉಮಾಪತಿ, ಸಹ ಕಾರ್ಯದರ್ಶಿಗಳಾದ ಈ.ಸತ್ಯಕೀರ್ತಿ, ಜಯದೇವಮೂರ್ತಿ, ಪರ್ವಿನ್‌ತಾಜ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
error: Content is protected !!
";