ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ-ಡಾ.ಹೊನ್ನೂರುಸ್ವಾಮಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಭಾರತೀಯ ಕಲೆ ಮತ್ತು ವಾಸ್ತುಶಿಲ್ಪದ ಜ್ಞಾನ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥ  ಡಾ.ಹೊನ್ನೂರು ಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಭಾಂಗಣದಲ್ಲಿ ಮಂಗಳವಾರ ಸರ್ಕಾರಿ ಕಲಾ ಕಾಲೇಜು ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಕಲೆ ಮತ್ತು ವಾಸ್ತುಶಿಲ್ಪಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

- Advertisement - 

ಬೌದ್ಧ ಸ್ತೂಪಗಳು, ವಿಹಾರಗಳು ಹಾಗೂ ಚೈತ್ಯಾಲಯಗಳ ಅಧ್ಯಯನದಿಂದ ವಿವಿಧ ಧರ್ಮಗಳ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ದೇವಾಲಯ ಮತ್ತು ವಾಸ್ತುಶಿಲ್ಪಗಳು ಜಾತ್ಯತೀತ ಮೌಲ್ಯಗಳನ್ನು ಒಳಗೊಂಡಿದ್ದು, ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತಿವೆ. ಹಾಗಾಗಿ, ಪ್ರಾಚೀನ ಪರಂಪರೆಯ ಬಗ್ಗೆ ವಿದ್ಯಾರ್ಥಿಗಳು ತೀವ್ರ ಕಳಕಳಿ ಹೊಂದಬೇಕು ಎಂದರು.

- Advertisement - 

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಬಿ. ಸುರೇಶ್ ಅವರು ಗಾಂಧಾರ ಮತ್ತು ಮಥುರಾ ಕಲೆಗಳ ವಿಶೇಷತೆ ಪರಿಚಯಿಸಿದರು. ಐಕ್ಯೂಎಸಿ ಸಂಚಾಲಕಿ ಪ್ರೊ. ತಾರಿಣಿ ಶುಭದಾಯಿನಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ. ಹನುಮಂತಪ್ಪ, ಡಾ. ರೇವಣಸಿದ್ದಪ್ಪ ಹಾಗೂ ಸ್ನಾತಕ ಪದವಿ ಮುಖ್ಯಸ್ಥ ಪ್ರೊ. ಮಹ್ಮದ್ ಬಾಷ ಇದ್ದರು. ಇತಿಹಾಸ ಪ್ರಾಧ್ಯಾಪಕ ಪ್ರೊ. ಬಿ. ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಎಸ್. ಬಿ. ಶಿವಪ್ರಸಾದ್ ಸ್ವಾಗತಿಸಿದರು.

Share This Article
error: Content is protected !!
";