ಚಂದ್ರವಳ್ಳಿ ನ್ಯೂಸ್, ತಿಪಟೂರು:
ರಾಜ್ಯದ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಪರಾಮರ್ಶೆ ಕುರಿತು ಜಿಲ್ಲಾಧಿಕಾರಿಗಳ ಆದೇಶದಂತೆ ತಿಪಟೂರು ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.
ಸದರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ೦೮೧೩೪-೨೫೧೦೩೯ ಆಗಿದ್ದು ತಾಲೂಕಿನ ಸಾರ್ವಜನಿಕರು ವಿಪತ್ತು ನಿರ್ವಹಣೆ ಮತ್ತು ಮುಂಜಾಗ್ರತೆಗಾಗಿ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದಾಗಿದೆ ಎಂದು ತಹಸೀಲ್ದಾರ್ ಪವನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.