ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024 ಹಾಗೂ 2025ನೇ ಸಾಲಿನಲ್ಲಿ ರಾಜ್ಯ ಸರ್ಕಾರಿ ಅಧಿಕಾರಿ, ನೌಕರರಿಗೆ (ಗ್ರೂಪ್ ಎ. ಬಿ. ಸಿ ಮತ್ತು ಡಿ) ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ”ಯನ್ನು ನೀಡಲು ತೀರ್ಮಾನಿಸಿದ್ದು, ಈ ಸಂಬಂಧ ನಾಮ ನಿರ್ದೇಶನಗಳನ್ನು ಸಲ್ಲಿಸಲು ಏಪ್ರಿಲ್ 14 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾ, ರಾಜ್ಯ ಮಟ್ಟದ ಪ್ರಶಸ್ತಿ ಆಯ್ಕೆಗೆ ನಾಮ ನಿರ್ದೇಶನಗಳನ್ನು 2025ರ ಏಪ್ರಿಲ್ 14 ರೊಳಗಾಗಿ ಆನ್ಲೈನ್ ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in ಮೂಲಕ ಮಾತ್ರವೇ ಸಲ್ಲಿಸಲು ಹಾಗೂ ಭೌತಿಕವಾಗಿ ಸಲ್ಲಿಸಿದ ಯಾವುದೇ ಮನವಿ ಹಾಗೂ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.