ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್.ಟಾಟಾ ಸಭಾಂಗಣದಲ್ಲಿ ಆಯೋಜಿಸಿದ್ದ “ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ”ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಜಲಸಂಪನ್ಮೂಲ ಸಚಿವರು, ಉಪಮುಖ್ಯಮಂತ್ರಿಗಳು ಆದ ಡಿ.ಕೆ ಶಿವಕುಮಾರ್, ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ, ಕರ್ನಾಟಕ ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ವಿಶ್ವಬ್ಯಾಂಕ್ ಉಪಾಧ್ಯಕ್ಷ ಜೊಹನ್ನೆಸ್ ಕಾರ್ನೆಲ್ಸ್ ಮಾರಿಯಾ ಜಟ್,
ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಸುಬೋಧ್ ಯಾದವ್, ಕೇಂದ್ರ ಜಲ ಆಯೋಗದ ಮುಖ್ಯಸ್ಥ ಅನುಪಮ್ ಪ್ರಸಾದ್, ಜಪಾನಿನ ಐಸಿಹೆಚ್ಎಆರ್ಎಂ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ತೊಶಿಯೋ ಕೊಯ್ಕೆ, ಬೃಹತ್ ಅಣೆಕಟ್ಟು ಅಂತಾರಾಷ್ಟ್ರೀಯ ಆಯೋಗದ ಅಧ್ಯಕ್ಷ ಡಿ.ಕೆ. ಶರ್ಮಾ, ಭಾರತೀಯ ವಿಜ್ಞಾನ್ ಸಂಸ್ಥೆಯ ಡೀನ್ ಪ್ರೋ. ಸತ್ಯಂ ಸುವಾಸ್ ಸೇರಿ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

