ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸ್ನಾತಕೋತರ ವಿಭಾಗಗಳು ಮತ್ತು ಸಂಯೋಜಿತ ಸಂಶೋಧನಾ ಕೇಂದ್ರಗಳಲ್ಲಿ, ಸಂಶೋಧನಾ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅಗತ್ಯ ವಿದ್ಯಾರ್ಹತೆ ಹೊಂದಿರುವ ಆಸಕ್ತ ಸ್ನಾತಕೋತರ ಪಧವೀದರರು ಆನ್ಲೈನ್ ಹಾಗೂ ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲಿಸಬಹುದು.
ಪ್ರವೇಶಕ್ಕಾಗಿ ಅಗತ್ಯವಾದ ವಿದ್ಯಾರ್ಹತೆ, ಪ್ರವೇಶ ಪರೀಕ್ಷೆಯ ವಿವರಗಳು, ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ಹೊಂದುವ ವಿವರಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಸಂದಾಯದ ವಿವರ, ಲಭ್ಯವಿರುವ ವಿಷಯವಾರು ಖಾಲಿ ಸ್ಥಾನಗಳು, ಸಂಶೋಧನಾ ಕೇಂದ್ರಗಳ ವಿವರ ಇತ್ಯಾದಿಗಳನ್ನು ವಿಶ್ವವಿದ್ಯಾಲಯದ ಜಾಲತಾಣ https://bcu.ac.in/onlineapp/ ರಲ್ಲಿ ಪ್ರಕಟಸಿಲಾಗಿದೆ.
ಅರ್ಜಿಗಳನ್ನು 2026 ರ ಫೆಬ್ರವರಿ 19 ರಿಂದ ಮಾರ್ಚ್ 18 ವರೆಗೆ ದಂಡ ಶುಲ್ಕವಿಲ್ಲದೆ ಹಾಗೂ ರೂ. 200.00 ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ.
ಪ್ರವೇಶ ಪರೀಕ್ಷೆಯ ದಿನಾಂಕವನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯದ ಜಾಲತಾಣ ತಿತಿತಿ.bಛಿu.ಚಿಛಿ.iಟಿ ರಲ್ಲಿ ಪ್ರಕಟಸಿಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಶುಲ್ಕ ಪಾವತಿ ರಶೀದಿಯೊಂದಿಗೆ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ಕುಲಸಚಿವರು (ಮೌಲ್ಯಮಾಪನ) ರವರ ಕಛೇರಿ, ಜ್ಞಾನಜ್ಯೋತಿ ಸೆಂಟ್ರಲ್ ಕಾಲೇಜು ಅವರಣ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು –560001 ಅವರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣದಲ್ಲಿ ಅಗತ್ಯ ವಿವರ ಹಾಗೂ ಸೂಚನೆಗಳನ್ನು ಗಮನಿಸಬಹುದು ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

