ಸಹಾಯಧನಕ್ಕಾಗಿ ಪ್ರಸ್ತಾವನೆಗಳ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲಾ ವಲಯ (ಎಂಎಂಆರ್) ಯೋಜನೆಯಡಿ ಕೈಮಗ್ಗ ಉದ್ದಿಮೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಈ ಯೋಜನೆಯಡಿ ನೇಕಾರರಿಗೆ ದುಡಿಯುವ ಬಂಡವಾಳ ಸಾಲ, ಅಧ್ಯಯನ ಪ್ರವಾಸ ಹಾಗೂ ಕೈಮಗ್ಗ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ಒದಗಿಸಲಾಗುತ್ತದೆ. ಜಿಲ್ಲೆಯ ಅರ್ಹ ಕಾರ್ಯನಿರತ ಕೈಮಗ್ಗ ನೇಕಾರ ಸಹಕಾರ ಸಂಘದವರು ತಮ್ಮ ಬೇಡಿಕೆ ಅನುಸಾರ ಸಹಾಯಧನ ಮಂಜೂರಾತಿಗಾಗಿ ಸೂಕ್ತ ಪ್ರಸ್ತಾವನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ 2026ರ ಏಪ್ರಿಲ್ 15 ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ಕಚೇರಿಗೆ ಸಲ್ಲಿಸಬೇಕು.

- Advertisement - 

 ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಕಚೇರಿಯ ದೂರವಾಣಿ ಸಂಖ್ಯೆ 08194-221426ಕ್ಕೆ ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";