ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ವಿಜಯನಗರ (ಹೊಸಪೇಟೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೂತನವಾಗಿ ಆರಂಭಿಸಿರುವ ಕಮಲಾಪುರ (ಹೊಸಪೇಟೆ) ಪ್ರಾದೇಶಿಕ ಕೇಂದ್ರದಿಂದ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಎಂ.ಪ್ರಶಾಂತ್ ತಿಳಿಸಿದ್ದಾರೆ.

 ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತು, ಖಾಸಗಿ, ಸರ್ಕಾರಿ, ಅರೆ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ದೂರಶಿಕ್ಷಣ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ವಿಜಯನಗರ ಜಿಲ್ಲಾ ವ್ಯಾಪ್ತಿಯ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಪ್ರಥಮ ಬಿಎ, ಬಿಕಾಂ, ಬಿಎಸ್ಸಿ, ಬಿಲಿಬ್/ಐಎಸ್ಸಿ, ಬಿಸಿಎ, ಬಿಬಿಎ ಮತ್ತು ಬಿಎಸ್‌ಡಬ್ಲೂ ಹಾಗೂ ಎಂಎ (ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ,

ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ), ಎಂಎ-ಪತ್ರಿಕೋದ್ಯಮ ಮತ್ತು ಸಮೂಹ, ಸಂವಹನ, ಎಂ.ಕಾಂ, ವಿವಿಧ ಎಂ.ಎಸ್ಸಿ(ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ, ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೋಷಣೆ, ಜೀವರಸಾಯನಶಾಸ್ತ್ರ, ಭೂಗೋಳ ಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಪದವಿ ಶಿಕ್ಷಣ ಕ್ರಮಗಳಿಗೆ ವಿವಿಯ ನಿಯಮಗಳಿಗೆ ಅನುಗುಣವಾಗಿ ಸ್ಥಳದಲ್ಲಿಯೇ ದಾಖಲಾತಿ ಪಡೆದು ಪ್ರವೇಶ ನೀಡಲಾಗುವುದು.

ವಿದ್ಯಾರ್ಥಿಗಳು ಆನ್‌ಲೈನ್‌ಮೂಲಕ ಅರ್ಜಿ ಹಾಕಿಕೊಂಡು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿಜಯನಗರ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಿ, ನಿಗದಿತ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಪ್ರವೇಶಕ್ಕೆ ಮಾ.31 ರಂದು ಕೊನೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ : ಪ್ರಾದೇಶಿಕ ನಿರ್ದೇಶಕರು 9945171920, ಪ್ರವೇಶಾತಿಗಾಗಿ 8310786885, 73535482254, 8088681698 ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";