ಹೊರಗೆ ಫೈಟ್, ಒಳಗೆ ಜಮೀರ್-ಯತ್ನಾಳ್ ಕುಚುಕು ಕುಚುಕು

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಸಚಿವ ಜಮೀರ್ ಅಹಮದ್ ಖಾನ್, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಗಡೆ ಫೈಟ್ ಮಾಡಿಕೊಂಡು ರಾಜ್ಯ ದೇಶದ ಗಮನ ಸೆಳೆದವರು. ಆದರೆ ಒಳಗಡೆ ಇಬ್ಬರೂ ಆತ್ಮೀಯ ಸ್ನೇಹಿತರಂತೆ ಕುಚುಕು ಕುಚುಕು ಆಟ ಶುರು ಮಾಡಿದ್ದಾರೆ.

- Advertisement - 

ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ವಕ್ಫ್ ಮಂಡಲಿ ರೈತರು, ದೇವಸ್ಥಾನ, ಮಠಗಳ ಜಮೀನುಗಳನ್ನು ಅಕ್ರಮವಾಗಿ ವಶಕ್ಕೆ ಪಡೆಯುತ್ತಿದೆ ಎಂದು ನಿತ್ಯ ಬೀದಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದಾರೆ.​

- Advertisement - 

ಆದರೆ ಡಿಸೆಂಬರ್-17 ರಂದು ಯತ್ನಾಳ್ ಅವರು ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಗಮನ ಸೆಳೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಜಮೀರ್ ಅಹಮ್ಮದ್ ಖಾನ್ ಕಚೇರಿಗೆ ಹೋಗಿ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಯತ್ನಾಳ್ ಚರ್ಚೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಯತ್ನಾಳ್, ಸಚಿವರನ್ನು ಭೇಟಿಯಾದದ್ದು ಕೇವಲ ಕ್ಷೇತ್ರದ ಅಭಿವೃದ್ಧಿಯ ವಿಚಾರಗಳಿಗೆ ಸಂಬಂಧಿಸಿದಂತೆ ಹೊರತು ಯಾವುದೇ ಚರ್ಚೆಗಲ್ಲ. ವಿಜಯಪುರ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಜನರ ಆಶೋತ್ತರವನ್ನು ಈಡೇರಿಸಲು ನಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement - 

 

 

Share This Article
error: Content is protected !!
";