ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಗುಲಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ತೊಘಲಕ್ ಆಡಳಿತ ಹೇಗಿದೆ ನೋಡಿ ಕರ್ನಾಟಕದ ಮಹಾಜನತೆ ! ಎಂದು ಜೆಡಿಎಸ್ ಕಿಡಿಕಾರಿದೆ.
ರಾಮನ ಹೆಸರಿನ “ರಾಮನಗರ” ಜಿಲ್ಲೆಯನ್ನು “ಬೆಂಗಳೂರು ದಕ್ಷಿಣ” ಎಂದು ವಿರೋಧವನ್ನು ಲೆಕ್ಕಿಸದೇ ಮರುನಾಮಕರಣ ಮಾಡಲಾಗಿದೆ.
“ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ”ಕ್ಕೆ ಮಾಜಿ ಪಿಎಂ “ಮನಮೋಹನ್ ಸಿಂಗ್ ವಿವಿ ಬೆಂಗಳೂರು” ಎಂದು ಹೆಸರಿಡಲು ಈಗ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ವಿಶ್ವಮಟ್ಟದಲ್ಲಿ ಬ್ರ್ಯಾಂಡ್ ಆಗಿದೆ. “ಬೆಂಗಳೂರು” ಹೆಸರನ್ನೇ ವಿಶ್ವವಿದ್ಯಾಲಯಕ್ಕೂ ಇಡಲಾಗಿತ್ತು. ಪರ್ಯಾಯಾವಾಗಿ ಮರುನಾಮಕರಣ ಮಾಡುವ ಅವಶ್ಯಕತೆ, ಜರೂರು ಏನಿತ್ತು? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ಅಧಿಕಾರದ ಮದ, ದರ್ಪ, ದುರಹಂಕಾರದಲ್ಲಿ ಮೆರೆಯುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಮೆಚ್ಚಿಸಲು ಬೆಂಗಳೂರಿನ ಘನತೆ, ಗೌರವಕ್ಕೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ವಿರೋಧದ ನಡುವೆಯೂ ಮಾಡುತ್ತಿರುವುದು ಅಕ್ಷಮ್ಯ ಎಂದು ಜೆಡಿಎಸ್ ಹರಿಹಾಯ್ದಿದೆ.