ಜುಲೈ 02ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ..ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ  ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜುಲೈ 02ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ  ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ  ಗೋವಿಂದ ಎಂ.ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ,

- Advertisement - 

ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ, ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಸುಮಿತಾ  ಬಿ.ಎನ್.ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಸೇರಿದಂತೆ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಚುನಾಯಿತ ನಗರಸಭಾ ಸದಸ್ಯರು ಹಾಗೂ ಗಣ್ಯರು ಭಾಗವಹಿಸುವರು.

ರಾಜ್ಯಪ್ರಶಸ್ತಿ ಪುರಸ್ಕøತರು ಹಾಗೂ ಬಾಪೂಜಿ ಪದವಿಪೂರ್ವ ಕಾಲೇಜು ಪ್ರಾಚಾರ್ಯೆ ಡಾ.ಎನ್.ಮಮತಾ ಉಪನ್ಯಾಸ ನೀಡುವರು. ಚಳ್ಳಕೆರೆಯ ಶ್ರೀನಿವಾಸ್ ಮತ್ತು ತಂಡದವರಿಂದ ಗೀತಗಾಯನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";