ಜನರಲ್ಲಿ ಆತಂಕ ಸೃಷ್ಠಿಸಿದ್ದ ಕಾಡಾನೆ ಸೆರೆ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮಲೆನಾಡು ಭಾಗದಲ್ಲಿ ಕಾಡಾನೆಯೊಂದು ಆತಂಕ ಸೃಷ್ಟಿಸಿದ್ದು ಆ ಕಾಡಾನೆ ಕೊನೆಗೂ ಸೆರೆ ಸಿಕ್ಕಿದ್ದಾನೆ.
ಈ ಕಾಡಾನೆ ಕುಳ್ಳ ಅಂತಾನೇ ಫೇಮಸ್ ಆಗಿತ್ತು. ಇಂದು ಈ ಊರಲ್ಲಿ ಇದ್ದರೆ
, ನಾಳೆ ಮತ್ತೊಂದು ಊರಲ್ಲಿ ಕಾಣಿಸಿಕೊಂಡು ದಾಂಧಲೆ ಮಾಡುತ್ತಿದ್ದ ಕುಳ್ಳ ಕಾಡಾನೆ ಕೊನೆಗೂ ಸೆರೆ ಸಿಕ್ಕಿದ್ದಾನೆ.

ಕಳೆದ ನಾಲ್ಕು ದಿನಗಳಿಂದ ನಡೆದ ಆಪರೇಷನ್ ಕೊನೆಗೂ ಯಶಸ್ವಿಯಾಗಿದ್ದೇ ರಣ ರೋಚಕ.
ಹಾಸನ
, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಳ್ಳು ಕಾಡಾನೆ ಖ್ಯಾತಿ ಪಡೆದಿದ್ದ ಒಂಟಿ ಸಲಗ, ಅವನು ಊರಿಗೆ ಎಂಟ್ರಿ ಕೊಟ್ರೆ ಇಡೀ ಊರಲ್ಲೇ ದಾಂಧಲೆ ಮಾಡಿ ಆತಂಕ ಸೃಷ್ಟಿ ಮಾಡುತ್ತಿದ್ದ.

ಜನರು ಸಿಕ್ಕಿದ್ದರೆ ದಾಳಿಗೆ ಬರ್ತಿದ್ದ ಕಾಡಾನೆ ಕೊನೆಗೂ ಲಾಕ್ ಆಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಂಚಾರ ಮಾಡಿ ಆತಂಕ ಸೃಷ್ಟಿ ಮಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮೂಡಿಗೆರೆ ತಾಲೂಕಿನಲ್ಲಿ ಕಾರ್ಯಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಏಕಲವ್ಯ ಟೀಮ್ ‌ನಡೆಸಿದ ಕಾರ್ಯಚರಣೆಯಲ್ಲಿ ಕೊನೆಗೂ ಕಾಡಾನೆ ಸೆರೆ ಸಿಕ್ಕಿದೆ.

ಮೂಡಿಗೆರೆ ತಾಲೂಕಿನಲ್ಲಿ ಕಳೆದ‌‌ನಾಲ್ಕು ದಿನದಿಂದ ಭೀಮ ಟೀಮ್ ನೇತೃತ್ವದಲ್ಲಿ ಕಾಡಾನೆ ಸೆರೆಗಾಗಿ ಕಾರ್ಯಚರಣೆ ನಡೆದಿತ್ತು. ನಿರಂತರವಾಗಿ ನಡೆದ ಕಾರ್ಯಚರಣೆಯಲ್ಲಿ ಮೂಡಿಗೆರೆ ತಾಲೂಕಿನ ಹಾಂದಿ ಬಳಿ‌ಸೆರೆಯಾಗಿದೆ.

ರಾಜ್ಯ ಸರ್ಕಾರಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದರು. ಹಾಗಾಗಿ ಸರ್ಕಾರದಿಂದ ಸೆರೆ ಕಾರ್ಯಚರಣೆಗೆ ಅನುಮತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಕೊನೆಗೂ ಕಾಡಾನೆ ಸೆರೆ ಹಿಡಿದಿದ್ದಾರೆ. ಎರಡು ಜಿಲ್ಲೆಗಳ ಮೂರು ತಾಲೂಕಿನಲ್ಲಿ ಈ ಕಾಡಾನೆ ಆತಂಕ ಸೃಷ್ಟಿ ಮಾಡಿತ್ತು. ಕಾಡಾನೆ ಸೆರೆ ಸಿಗುತ್ತಿದ್ದಂತೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

 

Share This Article
error: Content is protected !!
";