ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿವಿ ಎಂದು ಮರು ನಾಮಕರಣ ಮಾಡುವ ಅವಶ್ಯಕತೆ ಏನಿತ್ತು ಸಿದ್ದರಾಮಯ್ಯ ಅವರೇ? ಬೆಂಗಳೂರು ನಗರ ವಿವಿಗೂ ಮನಮೋಹನ್ ಸಿಂಗ್ ಅವರಿಗೂ ಏನು ಸಂಬಂಧ? ಇದು “ಕಾಂಗ್ರೆಸ್ಗುಲಾಮಗಿರಿ” ! ಎಂದು ಜೆಡಿಎಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಕರ್ನಾಟಕದಲ್ಲಿ ಹುಟ್ಟಿದ ಸಾವಿರಾರು ಕನ್ನಡಿಗ ಮಹಾನ್ಸಾಧಕರು ಇದ್ದರೂ ಅವರು ಯಾರು ಕಾಂಗ್ರೆಸ್ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ಕನ್ನಡ ದ್ರೋಹಿ ಸಿದ್ದರಾಮಯ್ಯನವರೇ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.