ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ನಾಡು ನುಡಿ ಭಾಷೆಗೆ ಅವಹೇಳನಕಾರಿ ರೀತಿಯಲ್ಲಿ ವರ್ತಿಸಿದ ಎಂ ಇ ಎಂ ಪುಂಡರ ವಿರುದ್ದ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆ ಇರುವುದರಿಂದ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡರ ಬಣದಿಂದ ಬೆಂಬಲವಿಲ್ಲ. ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ ಹೇಳಿಕೆ ನೀಡಿದ್ದಾರೆ.
ಅವರು ಮಾತನಾಡಿ ಮಾ.20 ರಿಂದ ಪರೀಕ್ಷಾ ಸಮಯದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಹಲವು ಸಂಘಟನೆಗಳು ಕರೆದಿರುವ 22 ರ ಶನಿವಾರದ ಕರ್ನಾಟಕ ಬಂದ್ಗೆ ನಾರಾಯಣಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಬಲವಿಲ್ಲ ಎಂದರು ಹಾಗು ನಮ್ಮ ನಾಡು ನುಡಿ ನೆಲ ಭಾಷೆಗೆ ತೊಂದರೆ ಸಮಯದಲ್ಲಿ ಹಿತ ಕಾಪಾಡುವಲ್ಲಿ ಹೋರಾಟ ಮಾಡುವುದರ ಮೂಲಕ ನಾಡಿನ ರಕ್ಷಣೆ ಕರ್ನಾಟಕ ರಕ್ಷಣಾ ವೇದಿಕೆ ಸದಾ ಹೋರಾಟದ ಮಂಚೂಣಿಯಲ್ಲಿದ್ದು ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ನೇತೃತ್ವದಲ್ಲಿ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದೆ.
ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯ ವಾದ್ದರಿಂದ ಬಂದ್ ಮಾಡುವುದರಿಂದ ಅನೇಕ ರೀತಿಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಯಾಗ ಬಾರದೆಂಬ ಉದ್ದೇಶದಿಂದ ಕರ್ನಾಟಕ ಬಂದ್ಗೆ ಬೆಂಬಲ ವ್ಯಕ್ತಪಡಿಸುವುದಿಲ್ಲ ಎಂದರು.