ಹಂಪಿ ಉತ್ಸವ ಭರ್ಜರಿ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಕವಿತಾ ಮನ್ನಿಕೇರಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ವಿಜಯನಗರ ಜಿಲ್ಲೆಯ ಐತಿಹಾಸಿಕ ಹಂಪಿ ಉತ್ಸವದ ಪ್ರಯುಕ್ತ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸುಮಾರು
150ಕ್ಕೂ ಹೆಚ್ಚು ಬೈಕ್‌ಗಳೊಂದಿಗೆ ಭರ್ಜರಿ ಬೈಕ್ ರ್ಯಾಲಿ ಆಯೋಜಿಸಲಾಯಿತು.

ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾದ ಈ ಬೈಕ್ ರ್ಯಾಲಿಗೆ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಚಾಲನೆ ನೀಡಿದರು. ರ್ಯಾಲಿಯು ಹೊಸಪೇಟೆ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ, ಅನಂತಶಯನಗುಡಿ, ಕೊಂಡನಾಯಕನಹಳ್ಳಿ, ಮಲಪನಗುಡಿ, ಗಾಳೆಮ್ಮನಗುಡಿ, ಕಡ್ಡಿರಾಂಪುರ ಮಾರ್ಗವಾಗಿ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದವರೆಗೆ ಯಶಸ್ವಿಯಾಗಿ ತಲುಪಿತು.

- Advertisement - 

ರ್ಯಾಲಿಯಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಹಂಪಿ ಉತ್ಸವದ ಮಹತ್ವವನ್ನು ಜನತೆಗೆ ತಲುಪಿಸುವುದು ಹಾಗೂ ಪ್ರವಾಸೋದ್ಯಮ ಉತ್ತೇಜನವೇ ಈ ರ್ಯಾಲಿಯ ಪ್ರಮುಖ ಉದ್ದೇಶವಾಗಿತ್ತು.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಸಿಇಒ ಅಕ್ರಮ್ ಷಾ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಭಾಗವಹಿಸಿ ರ್ಯಾಲಿಗೆ ಬೆಂಬಲ ನೀಡಿದರು.

- Advertisement - 

ಹೊಸಪೇಟೆ ನಗರದ ನಾನಾ ವೃತ್ತಗಳಲ್ಲಿ ನಡೆದ ಬೈಕ್ ಸಂಚಾರ ಸಾರ್ವಜನಿಕರ ಗಮನ ಸೆಳೆಯಿತು. ಐತಿಹಾಸಿಕ ಹಂಪಿಯ ವೈಭವವನ್ನು ಮತ್ತಷ್ಟು ಪ್ರಚಾರಗೊಳಿಸುವ ನಿಟ್ಟಿನಲ್ಲಿ ಹಂಪಿ ಉತ್ಸವಕ್ಕೆ ಈ ಬೈಕ್ ರ್ಯಾಲಿ ಹೊಸ ಉತ್ಸಾಹ ತುಂಬಿತು.

 

 

 

 

Share This Article
error: Content is protected !!
";