ಮರಣ ದಂಡನೆಯಿಂದ ಪಾರಾದ ಕೇರಳದ ನರ್ಸ್ ನಿಮಿಷಾ ಪ್ರಿಯಾ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರು ವಿದೇಶದ ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದು ಈಗ ನಿರಾಳತೆ ಸಿಕ್ಕಿದೆ.
ಅಲ್ಲಿನ ಸರ್ಕಾರ ನಿಮಿಷಾ ಪ್ರಿಯಾ ಅವರಿಗೆ ನೀಡಲಾದ ಮರಣದಂಡನೆ ರದ್ದುಪಡಿಸಿದೆ ಎಂದು ಕ್ರಿಶ್ಚಿಯನ್ ಧಾರ್ಮಿಕ ನಾಯಕ ಡಾ. ಕೆ.ಎ. ಪಾಲ್
 ಘೋಷಿಸುವ ಮೂಲಕ ಮರಣ ದಂಡನೆಯಿಂದ ನಿಮಿಷಾ ಪ್ರಿಯಾ ಪಾರಾಗಿದ್ದಾರೆ.

ಯೆಮೆನ್ ರಾಜಧಾನಿ ಸನಾದಿಂದ ಮಂಗಳವಾರ ರಾತ್ರಿ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ಅವರು ಇದನ್ನು ಬಹಿರಂಗಪಡಿಸಿದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಮತ್ತು ಯೆಮೆನ್ ನಾಯಕರೊಂದಿಗೆ ಹತ್ತು ದಿನಗಳ ಹಗಲು ರಾತ್ರಿ ಚರ್ಚೆಯ ನಂತರವೇ ಈ ಯಶಸ್ಸು ಸಾಧಿಸಲಾಗಿದೆ. ಇದು ದೇವರ ದಯೆಯಿಂದ ಸಾಧ್ಯ. ನಿಮಿಷಾ ಪ್ರಿಯಾ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ. ಭಾರತ ಸರ್ಕಾರವು ಅವರ ಸುರಕ್ಷಿತ ವರ್ಗಾವಣೆಗೆ ಈಗಾಗಲೇ ಲಾಜಿಸ್ಟಿಕಲ್ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಕೆ.ಎ. ಪಾಲ್ ಹೇಳಿದ್ದಾರೆ.

- Advertisement - 

ತಮ್ಮ ಎಕ್ಸ್ ವೇದಿಕೆಯಲ್ಲಿ ಕೆಎ ಪಾಲ್ ತಮ್ಮೊಂದಿಗೆ ಯೆಮೆನ್ ನಾಯಕರ ವೀಡಿಯೊವನ್ನು ಪೋಸ್ಟ್ ಮಾಡಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಭಾರತ ಸರ್ಕಾರ ವಿದೇಶಾಂಗ ಸಚಿವಾಲಯದ ಮೂಲಕ ಕಾನೂನು ನೆರವು ನೀಡಿದೆ.

ನಿಮಿಷಾ ಅವರ ಕುಟುಂಬಕ್ಕೆ ಕಾನೂನು ಬೆಂಬಲ ನೀಡಲು ವಕೀಲರನ್ನು ನೇಮಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

- Advertisement - 

ಸರ್ಕಾರವು ಶರಿಯಾ ಕಾನೂನಿನಡಿಯಲ್ಲಿ ಕ್ಷಮಾದಾನ ಅಥವಾ ಪರಿಹಾರ (ದಿಯಾ) ನಂತಹ ಆಯ್ಕೆಗಳನ್ನು ಸಹ ಪರಿಗಣಿಸಿದೆ. ಮೃತ ಮಹ್ದಿ ಅವರ ಕುಟುಂಬವು ರಕ್ತದ ಹಣವನ್ನು ಸ್ವೀಕರಿಸದ ಕಾರಣ ಪ್ರಕರಣವು ಮತ್ತಷ್ಟು ಜಟಿಲವಾಗಿತ್ತು.

ಖಾಂತಪುರಂ ಎಪಿ ಅಬುಬಕ್ಕರ್ ಮುಸ್ಲಿಯಾರ್ ಯೆಮೆನ್ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದರೂ, ಮೃತರ ಕುಟುಂಬವು “ನಮಗೆ ನ್ಯಾಯ ಬೇಕು, ಕ್ಷಮೆಯಲ್ಲ” ಎಂದು ಹೇಳಿಕೊಂಡಿತ್ತು. ಇನ್ನು ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.

2008ರಲ್ಲಿ ನರ್ಸ್ ಆಗಿ ಯೆಮೆನ್‌ಗೆ ಹೋದ ನಿಮಿಷಾ ಪ್ರಿಯಾ ಅಲ್ಲಿ ಸ್ಥಳೀಯ ಮಹ್ದಿಯೊಂದಿಗೆ ಪಾಲುದಾರಿಕೆಯೊಂದಿಗೆ ತನ್ನದೇ ಆದ ಕ್ಲಿನಿಕ್ ನಡೆಸುತ್ತಿದ್ದರು. ದಿನ ಕಳೆದಂತೆ ಆತ ಪ್ರಿಯಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದರಿಂದ ನಿಮಿಷಾ ಅವನಿಗೆ ಮಾದಕ ದ್ರವ್ಯಗಳ ಚುಚ್ಚುಮದ್ದು ನೀಡಿದ್ದು ಅದು ಓವರ್ ಡೋಸ್ ಆಗಿ ಮಹ್ದಿ ಮೃತಪಟ್ಟಿದ್ದ.

ಪರಿಣಾಮವಾಗಿ ನಿಮಿಷಾ ಪ್ರಿಯಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿ, ಯೆಮೆನ್ ನ್ಯಾಯಾಲವು ಆಕೆಗೆ ಮರಣದಂಡನೆ ವಿಧಿಸಿತ್ತು. ನಂತರ ವಿಚಾರಣಾ ನ್ಯಾಯಾಲಯವು 2020ರಲ್ಲಿ ಶಿಕ್ಷೆಯನ್ನು ಎತ್ತಿಹಿಡಿಯಿತು. ಆ ಬಳಿಕ 2023ರಲ್ಲಿ ಸುಪ್ರೀಂ ಕೋರ್ಟ್ ಸಹ ಶಿಕ್ಷೆಯನ್ನು ಎತ್ತಿಹಿಡಿಯಿತು. ನಿಮಿಷಾ ಪ್ರಿಯಾ ಪ್ರಸ್ತುತ ಸನಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಡಾ. ಕೆ.ಎ. ಪಾಲ್ ಅವರು ನಿಮಿಷಾ ಪ್ರಿಯಾ ಅವರ ಮರಣದಂಡನೆ ಕಡಿಮೆ ಮಾಡಲಾಗಿದೆ ಎಂದು ಘೋಷಿಸಿದರೂ, ಯೆಮೆನ್ ಸರ್ಕಾರ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದಾಗ್ಯೂ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ಯಶಸ್ಸಿಗೆ ಭಾರತ ಮತ್ತು ಯೆಮೆನ್ ಸರ್ಕಾರಗಳ ಸಹಕಾರ, ಧಾರ್ಮಿಕ ನಾಯಕರ ಉಪಕ್ರಮ ಮತ್ತು ಕೆ.ಎ. ಪಾಲ್ ಅವರಂತಹ ಜನರ ನಿರಂತರ ರಾಜತಾಂತ್ರಿಕತೆ ಕಾರಣವೆಂದು ಹೇಳಬಹುದು. ಅನೇಕ ಜನರು ನಿಮಿಷಾ ಪ್ರಿಯಾ ಮನೆಗೆ ಮರಳಲು ಕಾಯುತ್ತಿದ್ದಾರೆ.

 

 

Share This Article
error: Content is protected !!
";