ಸಾಲ ತೀರಿಸಲು ಸಾಲಕೊಟ್ಟ ಮನೆಗೆ ಕನ್ನ ಹಾಕಿದ ಖದೀಮರು

News Desk

ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲೇ ಕಳ್ಳತನ ಮಾಡಿರುವ ಗ್ಯಾಂಗ್​ಒಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವಂತಹ ಘಟನೆ ನೆಲಮಂಗಲ ನಗರದಲ್ಲಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಠಾಣೆಯ ಪೊಲೀಸರು 6 ಆರೋಪಿಗಳನ್ನು ಬಂಧಿಸಿ 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement - 

ಕುಖ್ಯಾತ ಕಳ್ಳ ಮೋರಿ ರಾಜ, ವೆಂಕಟೇಶ್, ಕವಿತಾ, ಹರೀಶ್, ನಾಗರಾಜ್ ಮತ್ತು ಪ್ರತಾಪ್​ ಬಂಧಿತ ಆರೋಪಿಗಳು. ಘಟನೆ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ-
ಉದ್ಯಮಿ ಮಂಗಳಾ ಎಂಬುವವರು ಸ್ನೇಹ ಧಮ್ ಬಿರಿಯಾನಿ ಹೆಸರಿನ ಹೋಟೆಲ್ ನಡೆಸುತ್ತಿದ್ದು ಅವರ ಬಳಿ ಕವಿತಾ ಸಾಲ ಪಡೆದಿದ್ದಳು. ಮಂಗಳಾ ಕೊಟ್ಟ ಸಾಲಕ್ಕೆ ಕವಿತಾಳಿಂದ ಅಂಗ್ರಿಮೆಂಟ್ ಮಾಡಿಕೊಂಡಿದ್ದರು.

- Advertisement - 

ಸಾಲ ವಾಪಸ್ ನೀಡಲಾಗದೆ ಮಂಗಳಾ ಮನೆಯಲ್ಲಿ ಅಣ್ಣ ವೆಂಕಟೇಶ್ ಜೊತೆ ಸೇರಿ ಕಳ್ಳತನಕ್ಕೆ ಕವಿತಾ ಪ್ಲ್ಯಾನ್ ಮಾಡಿದ್ದಳು.

ಸಹೋದರ ವೆಂಕಟೇಶ್​ಗೆ ಕುಖ್ಯಾತ ಕಳ್ಳ ಮೋರಿ ರಾಜ ಪರಿಚಯ ಇದ್ದು ಸಹಚರರ ಜತೆ ಸೇರಿ ಮಂಗಳಾ ಮನೆಯಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿ ಕಳ್ಳತನ ಮಾಡಿದ್ದರು.

ಈ ಕುರಿತು ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು  6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೋರಿ ರಾಜನ ವಿರುದ್ಧ 20ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ.

 

Share This Article
error: Content is protected !!
";