ಕೊಂಗಾಡಿಯಪ್ಪನವರ ಬದುಕು ಇಂದಿನ ಪೀಳಿಗೆ ಅರಿಯಲಿ-ಎಂ. ಜಿ. ಶ್ರೀನಿವಾಸ್

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರದ ಅಭಿವೃದ್ದಿಗೆ
 ಲೋಕ ಸೇವಾ ನಿರತ ಡಿ. ಕೊಂಗಾಡಿಯಪ್ಪ ನವರ ಕೊಡುಗೆ ಅಪಾರವಾಗಿದ್ದು, ಅವರ ನಿಸ್ವಾರ್ಥ ಸೇವೆ, ಶ್ರಮದಿಂದಾಗಿ ಇಂದು ದೊಡ್ಡಬಳ್ಳಾಪುರ ರಾಜ್ಯದಲ್ಲಿಯೇ ಹೆಸರುವಾಸಿಯಾಗಲು ಕಾರಣವಾಗಿದೆ. ಇಂತಹ ಮಹನೀಯರ ಪುತ್ಥಳಿಯನ್ನು ನಗರಸಭೆ ಕಾರ್ಯಾಲಯದ ಮುಂಭಾಗ ಸ್ಥಾಪಿಸಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ. ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ದೇವಾಂಗ ಮಂಡಲಿ ಅಧ್ಯಕ್ಷ  ಹಾಗೂ ನಗರಸಭಾ ಸದಸ್ಯ ಎಂ.ಜಿ.ಶ್ರೀನಿವಾಸ್ ಹೇಳಿದರು.

ಲೋಕ ಸೇವಾ ನಿರತ ಡಿ.ಕೊಂಗಾಡಿಯಪ್ಪನವರ 165 ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮುಖ್ಯರಸ್ತೆಯ ಮಾರುಕಟ್ಟೆ ಶಾಲೆಯ ಮುಂಭಾಗದಲ್ಲಿನ ಕೊಂಗಾಡಿಯಪ್ಪ ನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ  ಮಾತನಾಡಿದ ಅವರು

ನೇಕಾರಿಕೆಯಲ್ಲಿ ಪ್ರಸಿದ್ದವಾಗಿರುವ ದೊಡ್ಡಬಳ್ಳಾಪುರ ಕ್ಕೆ ಹೆಸರು ಬರಲು ಕೊಂಗಾಡಿಯಪ್ಪನವರ ಪರಿಶ್ರಮ ಕಾರಣವಾಗಿದೆ. ಇಂತಹ ಮಹನೀಯರ ನಿಂತಿರುವ ಭಂಗಿಯ ಪುತ್ಥಳಿಯನ್ನು ಸ್ಥಾಪಿಸಲು ಹಲವಾರು ಒತ್ತಾಯಗಳನ್ನು ಮಾಡಲಾಗಿದೆ. ಆದರೆ ಫಲಪ್ರದವಾಗಿಲ್ಲದಿರುವುದು ಬೇಸರದ ಸಂಗತಿಯಾಗಿದೆ. ಕೊಂಗಾಡಿಯಪ್ಪನವರ ಪರಿಶ್ರಮದಿಂದಾಗಿ ನಮ್ಮ ಊರಿನಲ್ಲಿ ಅಂದಿನ ಕಾಲದಲ್ಲಿಯೇ ವಿದ್ಯುತ್, ಕೊಳವೆ ಬಾವಿಪ್ರೌಢಶಾಲೆ, ಆಸ್ಪತ್ರೆಪಶು ವೈದ್ಯಶಾಲೆ, ಕೈಮಗ್ಗ ಮತ್ತು  ಗೃಹ ಕೈಗಾರಿಕಾ ತರಬೇತಿ ಕೇಂದ್ರಗಳು ಸ್ಥಾಪನೆಯಾಗಿದ್ದವು.

  ಅಕಾರಿಗಳ ಬಳಿಗೆ ತೆರಳಿ ಊರಿಗೆ ಆಗಬೇಕಾದ ಕೆಲಸಗಳನ್ನು ನಿವೇದನೆ ಮಾಡಿ ಆಗುವವರೆಗೂ ಬೆಂಬಿಡದೇ ಮಾಡಿಸುತ್ತಿದ್ದರು. ಕೊಂಗಾಡಿಯಪ್ಪನವರು ಊರಿನ ಯಾವ ಸಮಸ್ಯೆಯನ್ನಾಗಲೀ ಬಗೆಹರಿಸಲು ದುಡಿಯುತ್ತಿದ್ದರು. ಶಿಕ್ಷಣ, ಪರಿಸರ, ಸಮಾಜ ಸೇವೆಗಳಿಗೆ ಒತ್ತು ನೀಡಿದ್ದ ಅವರ ಬದುಕು ಹಾಗೂ ಜೀವನ ಕ್ರಮ ಇಂದಿನ ಪೀಳಿಗೆಗೆ ತಿಳಿಯಬೇಕು ಎಂದರು.

ಈ ಸಂದರ್ಭದಲ್ಲಿ ದೇವಾಂಗ ಮಂಡಲಿ ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಉಪಾಧ್ಯಕ್ಷರಾದ ಬಿ.ಜಿ.ಅಮರನಾಥ್, ಪಿ.ಗೋಪಾಲ್, ಸಹ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಎಚ್.ವಿ.ಅಖಿಲೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ನಗರಸಭೆ ಸದಸ್ಯರು, ದೇವಾಂಗ ಮಂಡಲಿ ನಿರ್ದೇಶಕರು ಭಾಗವಹಿಸಿದ್ದರು.

 

 

Share This Article
error: Content is protected !!
";