ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದೂ ದ್ವೇಷಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂದು ರಾಮನ ಹೆಸರು ಇರುವ ಕಾರಣಕ್ಕೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ. ಇಂದು ಕುಮಾರಸ್ವಾಮಿ ಹೆಸರು ಇರುವ ಕಾರಣಕ್ಕೆ ಕುಮಾರಸ್ವಾಮಿ ಲೇಔಟ್ ಹೆಸರು ಬದಲಾವಣೆ ಆಗಿದೆ ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕಾಪ್ರಹಾರ ಮಾಡಿದೆ.
ಓಲೈಕೆಗೂ ಒಂದು ಮಿತಿ ಬೇಡವೇ ಡಿ.ಕೆ ಶಿವಕುಮಾರ್ ಅವರೇ? ಕುಮಾರಸ್ವಾಮಿ ದೇವರ ದೇವಸ್ಥಾನ ಇರುವ ಕಾರಣ ಕುಮಾರಸ್ವಾಮಿ ಲೇಔಟ್ ವಾರ್ಡ್ ಎಂದು ನಾಮಕರಣ ಮಾಡಲಾಗಿತ್ತು. ಈಗ ಹೆಸರು ಬದಲಾಯಿಸಲು ಅಲ್ಲಿನ ಸ್ಥಳೀಯ ನಿವಾಸಿಗಳು ಅರ್ಜಿ ಹಾಕಿದ್ದರಾ ಬೆಂಗಳೂರು ಉಸ್ತುವಾರಿ ಸಚಿವರೇ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

