ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗಿಯಾಗಿದ್ದ ಕರ್ನಾಟಕದ ವಿವಿಧ ಜಿಲ್ಲೆಗಳ ಪದವಿ ಕಾಲೇಜುಗಳ ವಿದ್ಯಾರ್ಥಿಗಳನ್ನು ನವದೆಹಲಿಯ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ದೆಹಲಿಯ ನಿವಾಸದಲ್ಲಿ ಪ್ರೀತಿಪೂರ್ವಕವಾಗಿ ಭೇಟಿ ಮಾಡಲಾಯಿತು.
ವಿವಿಧ ಹಂತಗಳಲ್ಲಿ ಆಯ್ಕೆಯಾಗಿ ಕರ್ತವ್ಯ ಪಥದಲ್ಲಿ ನಡೆದ ಈ ಪ್ರತಿಷ್ಠಿತ ಪರೇಡ್ ನಲ್ಲಿ ಪಾಲ್ಗೊಂಡಿದ್ದ ಮಕ್ಕಳನ್ನು ಭೇಟಿಯಾಗಿ ಕುಶಲೋಪರಿ ನಡೆಸಿದ್ದು ಬಹಳ ಸಂತೋಷ ಉಂಟು ಮಾಡಿತು.
ಎಲ್ಲಾ ಮಕ್ಕಳಿಗೂ, ಇವರನ್ನು ರಾಷ್ಟ್ರ ರಾಜಧಾನಿವರೆಗೂ ಕರೆತಂದಿದ್ದ ಬೋಧಕರಿಗೆ ಎಲ್ಲರಿಗೂ ಶುಭವಾಗಲಿ ಎಂದು ಕುಮಾರಸ್ವಾಮಿ ಹಾರೈಸಿದರು.

