ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಎಸ್ ಎಂ ಗೊಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ. ಪಿ. ಲಕ್ಷ್ಮಿನಾರಾಯಣ್ ಹಾಗೂ ಉಪಾಧ್ಯಕ್ಷರಾಗಿ ನಾಗರಾಜುರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀನಾರಾಯಣ ಹಾಗೂ
ನಾಗರಾಜು ಸಹಕಾರ ಸಂಘವನ್ನ ಅಭಿವೃದ್ಧಿಯತ್ತ ಕೊಂಡೊಯ್ಯಲು ಸದಸ್ಯರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ ಇದುವರೆವಿಗೂ ಸಂಘದ ಅಭಿವೃದ್ಧಿಗೆ ಶ್ರಮಿಸಿದ ಹಿರಿಯರ ಮಾರ್ಗದರ್ಶನದಲ್ಲಿ ಸಂಘವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಅಹರ್ನಿಷಿ ತಾವು ಶ್ರಮಿಸುವುದಾಗಿ ತಿಳಿಸಿದ್ದಾರೆ.
ನೂತನ ವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮ ಪಂಚಾಯಿತಿ ಸದಸ್ಯ ಎನ್. ಲೋಕೇಶ್, ಶಿವಕುಮಾರ್, ಮಾಜಿ ಅಧ್ಯಕ್ಷರುಗಳಾದ ಜಿ. ಎಚ್. ಮಲ್ಲೇಶ್, ಚಿಕ್ಕೇಗೌಡ, ರಾಮಮುರ್ತಿ, ಗೋವಿಂದರಾಜು, ಬಸವರಾಜು ಮತ್ತು ಸಂಘದ ಎಲ್ಲಾ ನಿರ್ದೇಶಕರು ಹಾಗೂ ಗ್ರಾಮಸ್ಥರು ಅಭಿನಂದನೆ ಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಬದಲ್ಲಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆಂಪಣ್ಣ ಸೇರಿದಂತೆ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

