ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ಮೇಲೆ ಬ್ಯಾನ್ ತೂಗುಗತ್ತಿ ನೇತಾಡುತ್ತಿದೆ.
ತಮಿಳಿಂದ ಕನ್ನಡ ಹುಟ್ಟಿದೆ ಅಂತ ಕಮಲ್ ಹಾಸನ್ ಹೇಳಿಕೆ ನೀಡಿದ್ದರಿಂದಾಗಿ ವಿವಾಹ ಹುಟ್ಟಿಕೊಂಡಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಸದ್ಯ ಈ ವಿಚಾರವಾಗಿ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದು, ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡದಿರಲು ಮನವಿ ಮಾಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಗದೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಸಹಕಾರ ನೀಡುತ್ತೆ ಎಂದು ಭರವಸೆ ನೀಡಿದರು.
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಜೂನ್ 5ಕ್ಕೆ ಎಲ್ಲೆಡೆ ರಿಲೀಸ್ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸದ್ಯ ಕಾನೂನಿನಲ್ಲಿ ಸಿನಿಮಾ ನಿಷೇಧಿಸಲು ಅವಕಾಶ ಇಲ್ಲದಿರುವ ಹಿನ್ನೆಲೆ ಚಲನಚಿತ್ರ ವಾಣಿಜ್ಯ ಮಂಡಳಿ ರಾಜ್ಯ ಸರ್ಕಾರದ ಬೆಂಬಲ ಕೋರಿದೆ. ಅಲ್ಲದೆ ಈ ಕುರಿತು ಚಿತ್ರ ತಂಡ ಕೂಡ ಕೋರ್ಟ್ ಮೆಟ್ಟಿಲು ಏರಿದೆ.