ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಛೇರಿ ಪಕ್ಕದ ಪಶುಆಸ್ಪತ್ರೆ ಆವರಣದಲ್ಲಿರುವ ತರಬೇತಿ ಕೇಂದ್ರದಲ್ಲಿ, ರೈತರಿಗೆ ಪಶುಸಂಗೋಪನೆ ಕುರಿತು ವೈಜ್ಞಾನಿಕ ತರಬೇತಿ ನೀಡಲಾಗುವುದು.
ಸೆ.11 ರಿಂದ 12 ವರೆಗೆ ಕುರಿ ಸಾಕಾಣಿಕೆ, ಸೆ.15 ರಿಂದ 16 ವರೆಗೆ ಹೈನುಗಾರಿಕೆ, ಸೆ.22 ರಿಂದ 23 ವರಗೆ ಕೋಳಿ ಸಾಕಣಿಕೆ ಹಾಗೂ ಸೆ.25 ರಿಂದ 26 ವರೆಗೆ ಕುರಿ ಸಾಕಾಣಿಕೆ ಕುರಿತು ತರಬೇತಿ ನೀಡಲಾಗುವುದು.
ಪ್ರತಿ ತರಬೇತಿಯಲ್ಲಿ 25 ರೈತರು ಭಾಗವಹಿಸಲು ಅವಕಾಶವಿದೆ. ಆಸಕ್ತರು ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ಆಗಮಿಸಬೇಕು.
ವಾಟ್ಸ್ಪ್ ಮೂಲಕವೂ ನೊಂದಣಿಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111 ಹಾಗೂ 9886002248 ಸಂಪರ್ಕಿಸಬಹುದು. ತರಬೇತಿಗೆ ಯಾವುದೇ ಪ್ರೋತ್ಸಾಹ ಧನ ನೀಡುವುದಿಲ್ಲ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

