ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಾಯುಕ್ತ ವರದಿ ಅಲ್ಲ, ಸಿದ್ದರಾಮಯ್ಯ ಬಚಾವೋ ವರದಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ನಂತರ ಮಾನ್ಯ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ಈಗ ತಮ್ಮ ಎರಡನೇ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ತಮ್ಮ ಕೈಗೊಂಬೆ ಮಾಡಿಕೊಂಡಿದ್ದಾರೆ.
ಮುಡಾ ಹಗರಣದಲ್ಲಿ ಲೋಕಾಯುಕ್ತ ನಡೆಸಿರುವ ತನಿಖೆ ಕಾಟಾಚಾರದ ತನಿಖೆಯಾಗಿದ್ದು, ಲೋಕಾಯುಕ್ತ ಸಲ್ಲಿಸಿರುವ ವರದಿ ಕೇವಲ ಸಿದ್ದರಾಮಯ್ಯ ಬಚಾವೋ ವರದಿ ಅಷ್ಟೇ ಎಂದು ಅವರು ಟೀಕಿಸಿದ್ದಾರೆ.

