ಕಾಂಗ್ರೆಸ್ಸಿನ ನಟ್ಟು ಬೋಲ್ಟ್ ಟೈಟ್ ಮಾಡಿದ ಮಲ್ಲಿಕಾರ್ಜುನ ಖರ್ಗೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಸಿನ ಒಳಜಗಳಕ್ಕೆ ಕೊನೆಮೊದಲು ಎಂಬುದಿಲ್ಲ. ರಾಜ್ಯ ಕಾಂಗ್ರೆಸ್ಸಿನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಹಲಾಲ್ ಬಜೆಟ್ ಕೊನೆಯದ್ದಾಗಲಿದೆ ಎಂದು ಡಿ.ಕೆ ಶಿವಕುಮಾರ್ ಬಣ ಪ್ರತಿಪಾದಿಸುತ್ತಿದ್ದರೆ, ಇನ್ನೂ 3 ಬಜೆಟ್‌ಸಿದ್ದರಾಮಯ್ಯ ಅವರೇ ಮಂಡಿಸಲಿದ್ದಾರೆ ಎಂದು ಸಿದ್ದರಾಮಯ್ಯ ಬಣ ಹೇಳುವ ಮೂಲಕ ಎರಡೂವರೆ ವರ್ಷದ ಒಪ್ಪಂದವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದರಿಂದ ಎರಡೂ ಬಣಗಳಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ದೂರಿದೆ.

- Advertisement - 

ಕಾಂಗ್ರೆಸ್ಸಿನ ಈ ಒಳಜಗಳದಿಂದ ರಾಜ್ಯದ ಆಡಳಿತ ಯಂತ್ರ ನಟ್ಟು ಬೋಲ್ಟುಗಳೂ ಕಳಚಿಕೊಂಡಿದೆ. ಅಭಿವೃದ್ಧಿ ಎನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಒಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಶೂನ್ಯ ಅಭಿವೃದ್ಧಿ, ಒಟ್ಟಿನಲ್ಲಿ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ  ದಿವಾಳಿಗೊಳಿಸುತ್ತಿದೆ ಎಂದು ಬಿಜೆಪಿ ಭವಿಷ್ಯ ನುಡಿದಿದೆ.

- Advertisement - 
Share This Article
error: Content is protected !!
";