ಹುತಾತ್ಮರ ದಿನ : ಗಾಂಧೀಜಿಯವರಿಗೆ ಪುಷ್ಪ ನಮನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹುತಾತ್ಮರ ದಿನ ಆಚರಿಸಲಾಗಿದ್ದು, ಎಲ್ಲ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು, ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  

ಉಪವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಸೇರಿದಂತೆ ವಿವಿಧ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದು, ಈ ಸಂದರ್ಭದಲ್ಲಿ ಮೌನ ಆಚರಿಸಿ ಗೌರವ ಸಮರ್ಪಿಸಿದರು.

 

 

 

- Advertisement -  - Advertisement - 
Share This Article
error: Content is protected !!
";