ಹಾಲಿನ ಟ್ಯಾಂಕರ್ ಲಾರಿ ಪಲ್ಟಿ, ಅಪಾರ ಹಾನಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಸಾವಿರಾರು ಲೀ.ಹಾಲಿನೊಂದಿಗೆ ಸಾಗುತ್ತಿದ್ದ ಟ್ಯಾಂಕರ್​ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಬುಕ್ಕಸಾಗರ ಗೇಟ್ ಬಳಿ ಸಂಭವಿಸಿದೆ.

ರಸ್ತೆ ಬದಿ ನಿಂತಿದ್ದ ಪಿಕಪ್​​ ವಾಹನದ ಮೇಲೆ ಹಾಲಿನ ಟ್ಯಾಂಕರ್​ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಗಿ ಸಾಕಷ್ಟು ನಷ್ಟ ಸಂಭವಿಸಿದೆ.

- Advertisement - 

 

- Advertisement - 
Share This Article
error: Content is protected !!
";