ಮೇ.17 ಮತ್ತು 18ರಂದು ಸಚಿವ  ಡಿ.ಸುಧಾಕರ್ ಜಿಲ್ಲಾ ಪ್ರವಾಸ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ  ಸಚಿವ ಡಿ.ಸುಧಾಕರ್ ಅವರು ಇದೇ ಮೇ.17 ಮತ್ತು 18ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮೇ.17ರಂದು ಬೆಳಿಗ್ಗೆ 10ಕ್ಕೆ ಚಳ್ಳಕೆರೆ ವೆಂಕಟೇಶ್ವರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ತುರುವನೂರು ರಸ್ತೆಯ ಬೆವಿಕಂ ಹೊಸ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಯ ಮತ್ತು ಪಾಲನಾ ಘಟಕ3 ಮತ್ತು ಘಟಕ4 ಕಚೇರಿ ಉದ್ಘಾಟನೆ ನೆರವೇರಿಸುವರು.

ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರೊಂದಿಗೆ ತುಮಕೂರುಚಿತ್ರದುರ್ಗದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿದ  ಸಭೆಯಲ್ಲಿ ಭಾಗವಹಿಸುವರು.

 ಮಧ್ಯಾಹ್ನ 1ಕ್ಕೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಡೆಂಗ್ಯೂ ದಿನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ ಹಿರಿಯೂರು ನಗರ ವಾರ್ಡ್ ನಂ.22ರಲ್ಲಿ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ. ಮಧ್ಯಾಹ್ನ 2.30ಕ್ಕೆ ರಂಗನಾಥಪುರದಲ್ಲಿ 50 ಲಕ್ಷಗಳ ಪಶು ಚಿಕಿತ್ಸಾ ಕೇಂದ್ರ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ, ಮಧ್ಯಾಹ್ನ 3 ರಿಂದ ಸಂಜೆ 6ಕ್ಕೆ ಹಿರಿಯೂರು ಮತ್ತು ಚಿತ್ರದುರ್ಗ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಳ್ಳಕೆರೆಯಲ್ಲಿ ವಾಸ್ತವ್ಯ ಮಾಡುವರು.

ಮೇ.18ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಹಿರಿಯೂರು ಹಾಗೂ ಚಿತ್ರದುರ್ಗ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2ಕ್ಕೆ ರಂಗೇನಹಳ್ಳಿಯಲ್ಲಿ 50 ಲಕ್ಷಗಳ ಪಶು ಚಿಕಿತ್ಸಾ ಕೇಂದ್ರ ಕಟ್ಟಡ ಕಾಮಕಾರಿ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಹಿರಿಯೂರು ಹಾಗೂ ಚಿತ್ರದುರ್ಗ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ರಾತ್ರಿ 9ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

 

 

Share This Article
error: Content is protected !!
";