ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶುಆಸ್ಪತ್ರೆ ಆವರಣದಲ್ಲಿ ಮೇ 5 ಮತ್ತು 6 ರಂದು ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. 25 ಜನರಿಗೆ ತರಬೇತಿ ನಿಗದಿ ಪಡಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 3 ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು.

- Advertisement - 

ರೈತರು ವಾಟ್ಸ್ಪ್ ಮೂಲಕವೂ ನೊಂದಣಿ ಮಾಡಿಕೊಳ್ಳಬಹುದು. ನೊಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9482943111 ಮತ್ತು 9886002248 ಗೆ ಸಂಪರ್ಕಿಸುವAತೆ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";