ಮಾಸಿಕ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮ ಇದೇ 26ಕ್ಕೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಗಮಕ ಕಲಾಭಿಮಾನಿಗಳ ಸಂಘವು ನಡೆಸುತ್ತಿರುವ ಮಾಸಿಕ ಗಮಕ ವಾಚನ ವ್ಯಾಖ್ಯಾನ ಸಂಭ್ರಮದ 18ನೇ ಕಾರ್ಯಕ್ರಮವು ಇದೇ ತಿಂಗಳ 26/1/2025ರ  ಭಾನುವಾರ ಸಂಜೆ 6 ಗಂಟೆಗೆ ಸರಿಯಾಗಿ ನಗರದ  ಜೆ ಸಿ ಆರ್ ಬಡಾವಣೆಯ ಶ್ರೀ ಗಣಪತಿ ದೇವಾಲಯದ ಆವರಣದಲ್ಲಿ ನಡೆಯಲಿದೆ .

- Advertisement - 

ಈ ಸಂದರ್ಭದಲ್ಲಿ ಕುಮಾರವ್ಯಾಸ ಭಾರತದ ಉದ್ಯೋಗ ಪರ್ವದ “ಕರ್ಣಭೇದನ ಅಥವಾ ಕೌರವೇಂದ್ರನ ಕೊಂದೆ ನೀನು”  ಕಥಾ ಪ್ರಸಂಗವನ್ನು ಚಿತ್ರದುರ್ಗದ ವಿದುಷಿ ಮೀನಾಕ್ಷಿ ಭಟ್ ವಾಚನ ಮಾಡಲಿದ್ದು,ಡಾ. ರಾಜೀವಲೋಚನ ಅವರು ವ್ಯಾಖ್ಯಾನ ನೀಡಲಿದ್ದಾರೆ.

- Advertisement - 

ಈ ಕಥಾಭಾಗವು 10ನೇ ತರಗತಿಯ ಪಠ್ಯಾಧಾರಿತವಾಗಿದ್ದು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಮುಖ್ಯ ಅತಿಥಿಗಳಾಗಿ ಆರ್ಯವೈಶ್ಯ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್. ಕಾಶಿವಿಶ್ವನಾಥ ಶೆಟ್ಟಿ ಭಾಗವಹಿಸಲಿದ್ದಾರೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲೆಕಲಾವಿದರನ್ನು ಪ್ರೋತ್ಸಾಹಿಸಿ ಯಶಸ್ವಿಗೊಳಿಸಬೇಕೆಂದು ಸಂಘಟಕರು ಕೋರಿದ್ದಾರೆ.

- Advertisement - 

 

 

Share This Article
error: Content is protected !!
";