ಮಿಸ್ಟರ್‌ ಡಿ.ಕೆ ಶಿವಕುಮಾರ್ ರೌಡಿಸಂ, ಬ್ಲೂಫಿಲ್ಮ್ ದಂಧೆ, ಹನಿಟ್ರ್ಯಾಪ್‌ದಂಧೆ ನಿಲ್ಲಿಸಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಿಸ್ಟರ್‌…ಡಿ.ಕೆ ಶಿವಕುಮಾರ್, ಹೆಚ್.ಡಿ ಕುಮಾರಸ್ವಾಮಿ ಅವರಿಗೆ ರೈತರ ಬಗ್ಗೆ ಕಾಳಜಿ ಇರುವ ಕಾರಣಕ್ಕೆ
2 ಬಾರಿ ರೈತರ ಸಾಲ ಮನ್ನಾ  ಮಾಡಿದ್ದು. ಅನ್ನದಾತರ ಅಹವಾಲು ಕೇಳಲೆಂದೇ ವಿಧಾನಸೌಧದ ಬಾಗಿಲನ್ನು ಸದಾ ತೆರೆದಿಟ್ಟು ರೈತರೊಂದಿಗೆ ಸಭೆಗಳನ್ನು ನಡೆಸಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

- Advertisement - 

ಹಿಂದಿನ ಭಾರತೀಯ ಕಾಂಗ್ರೆಸ್ ಸರ್ಕಾರ ಒಕ್ಕೂಟ ಸರ್ಕಾರದಲ್ಲಿ ಹೇಗೆ ಆಡಳಿತ ನಡೆಸಿತ್ತು ಎಂದು ತಮಗೆ ಅರಿವಿಲ್ಲವೇ? ಅಥವಾ ಮಂದ ಬುದ್ಧಿಯೇ? ಜಾಣ ಕುರುಡೇ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

- Advertisement - 

ಸಂಪದ್ಭರಿತವಾಗಿರುವ ಕರ್ನಾಟಕವನ್ನು ದಶಕಗಳ ಕಾಲ ಕರ್ನಾಟಕ ಕಾಂಗ್ರೆಸ್ ಆ‍ಳ್ವಿಕೆ ಮಾಡಿ ಕೊಳ್ಳೆ ಹೊಡೆದಿದ್ದೀರಿ, ಈಗಲೂ ಎಟಿಎಂನಂತೆ ಬಳಸಿಕೊಳ್ಳುತ್ತಿದ್ದೀರಿ. ಮೊದಲು ಕರ್ನಾಟಕದಲ್ಲಿ ಲೂಟಿ ಮಾಡುವುದನ್ನು ನಿಲ್ಲಿಸಿ. ಸರ್ಕಾರಿ ಗುತ್ತಿಗೆಯಲ್ಲಿ 60% ಕಮೀಷನ್‌ಪಡೆಯುತ್ತಿರುವುದನ್ನು ನಿಲ್ಲಿಸಿ.

 ಬೆಂಗಳೂರಲ್ಲಿ ನಿಮ್ಮ ಕುಟುಂಬದ ಆಸ್ತಿ ವಿಸ್ತರಣೆ ಯೋಜನೆಗಳನ್ನು ನಿಲ್ಲಿಸಿ. ರೌಡಿಸಂ, ಬ್ಲೂಫಿಲ್ಮ್ ದಂಧೆ, ಹನಿಟ್ರಾಪ್‌ದಂಧೆ ನಿಲ್ಲಿಸಿ. ರಾಜಕೀಯ ವ್ಯಭಿಚಾರ ಮಾಡುವುದನ್ನು ನಿಲ್ಲಿಸಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

- Advertisement - 

 

Share This Article
error: Content is protected !!
";