ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರ ವ್ಯಾಪ್ತಿಯಲ್ಲಿ ಪ್ರತಿ ಶನಿವಾರ ಸ್ವಚ್ಛತಾ ಇ ಸೇವಾ ಕಾರ್ಯಕ್ರಮದಡಿ “ನಮ್ಮ ಚಿತ್ತ ಸ್ವಚ್ಛತೆಯತ್ತ ” ಎಂಬುವಂತೆ ಒಂದೊಂದು ವಾರ್ಡ್ ಸ್ವಚ್ಛತಾ ಆಂದೋಲನ ಹಮ್ಮಿಕೊಂಡಿದ್ದು ಅದರಂತೆ ಶನಿವಾರ ವಾರ್ಡ್ ನಂ 6ರಲ್ಲಿ ಸಿದ್ದನಾಯಕ ಸರ್ಕಲ್ ಆಂಜನೇಯ ದೇವಸ್ಥಾನದ ಬಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸ್ವಚ್ಛತಾ ಇ ಸೇವಾ ಕಾರ್ಯಕ್ರಮಕ್ಕೆ ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಗೌರವಾನ್ವಿತ ಸದಸ್ಯರುಗಳು ಹಾಗೂ ಪೌರಾಯುಕ್ತರು ಮತ್ತು ಹಿರಿಯ ಮತ್ತು ಕಿರಿಯ ಆರೋಗ್ಯ ನಿರೀಕ್ಷಕರುಗಳು
ಮತ್ತು ದಪ್ಪೇದಾರಗಳು ಹಾಗೂ ಪೌರಕಾರ್ಮಿಕರು ಮತ್ತು 06ನೇ ವಾರ್ಡ್ನ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

