ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾಗಿ ಸಣ್ಣಪ್ಪ, ವಿಠಲ್, ರತ್ನಮ್ಮ ಅವಿರೋಧ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ಶನಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

- Advertisement - 

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಆದೇಶದ ನಗರಸಭೆ ಸದಸ್ಯರಾದ ಎಂ. ಡಿ .ಸಣ್ಣಪ್ಪ, ಎಲ್. ಜಿ. ರತ್ನಮ್ಮ ಹಾಗೂ ವಿಠಲ್ ಇವರುಗಳನ್ನು ಅವಿರೋಧವಾಗಿ ನಗರಸಭಾ ಸಾಯಿ ಸಮಿತಿ ಅಧ್ಯಕ್ಷರುಗಳನ್ನಾಗಿ ಆಯ್ಕೆ ಮಾಡಲಾಯಿತು.

- Advertisement - 

ಈ ಸಂದರ್ಭದಲ್ಲಿ ನಗರ ಸಭೆಯ ಎಲ್ಲಾ ಸದಸ್ಯರುಗಳು ಹಾಜರಿದ್ದು ಸಚಿವರು ಸೂಚಿಸಿದ ವ್ಯಕ್ತಿಗಳನ್ನ ಆಯ್ಕೆ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಕೊಟ್ಟಿದ್ದಾರೆ.

ಈ ಸಂದರ್ಭದಲ್ಲಿ ನಗರಸಭೆಯ ಬಹುತೇಕ ಸದಸ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸಚಿವ ಸುಧಾಕರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ನಗರಸಭೆಯ ಪೌರಾಯುಕ್ತ ಎ.ವಾಸೀಂ ಅವರು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

- Advertisement - 

ಚುನಾವಣೆ ನಂತರ ನಗರಸಭೆಯ ಕಚೇರಿಯಲ್ಲಿ ಸದಸ್ಯರುಗಳು ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾದವರಿಗೆ ಪುಷ್ಪಮಾಲೆ ಅರ್ಪಿಸಿ ಗೌರವಿಸಿದರು.

 

 

Share This Article
error: Content is protected !!
";