ನಂದಿನಿ ಹಾಲಿನ ದರ ಮತ್ತೇ ಏರಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ನಂದಿನಿ ಹಾಲಿನ ದರವನ್ನು ಮತ್ತೆ ಏರಿಕೆ ಮಾಡುವ ಸಾಧ್ಯತೆ ಇದ್ದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾಹಿತಿ ನೀಡಿದ್ದಾರೆ.

ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಬುಧವಾರ ಪರೋಕ್ಷವಾಗಿ ಹಾಲಿನ ದರ ಏರಿಕೆ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

- Advertisement - 

ಬೇರೆ ರಾಜ್ಯಗಳಲ್ಲಿ ಹಾಲಿನ ದರ ಜಾಸ್ತಿ ಇದೆ. ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ. ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ. ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ ಎಂದು ಸುರೇಶ್ ತಿಳಿಸಿದರು.

ತುಪ್ಪ ದರ ಏರಿಕೆ ಮಾಡಲಾಗಿದ್ದು, ಬೇರೆ ಕಂಪನಿಯ ಹಾಲು ಆನ್‌ಲೈನ್‌ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ರೈತರಿಗೆ ಹಾಲಿನ ಹಣ ಕೂಡಲೇ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ ಉಳಿಸಿಕೊಂಡಿಲ್ಲ ಅನ್ಸುತ್ತೆ ಎಂದು ಡಿಕೆ ಸುರೇಶ್ ಹೇಳಿದರು.

- Advertisement - 

ಪ್ರತಿನಿತ್ಯ ನಮ್ಮಲ್ಲಿ 95 ಲಕ್ಷದಿಂದ 1 ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಆಗುತ್ತದೆ. 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದಲೇ ರೈತರಿಗೆ ಹಣ ಕೊಡುತ್ತಿದ್ದೇವೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಗಳನ್ನ ರೈತರಿಗೆ ಕೊಡಲು ಸೂಚಿಸಿದ್ದೇವೆ ಎಂದು ಅವರು ತಿಳಿಸಿದರು.

ನಂದಿನಿ ಬೆಣ್ಣೆ ಮತ್ತು ತುಪ್ಪಕ್ಕೆ ಬೇಡಿಕೆ ಇದ್ದು ನಾವು ತುಪ್ಪಕ್ಕೆ ನಿಗದಿ ಮಾಡಿರುವ ದರ ಮಾರುಕಟ್ಟೆಗಿಂತ ಕಡಿಮೆಯಿದೆ. ಆದರೆ ಗುಣಮಟ್ಟದಲ್ಲಿ ನಾವೇ ಮುಂಚೂಣಿಯಲ್ಲಿದ್ದೇವೆ ಎಂದು ಡಿ.ಕೆ ಸುರೇಶ್ ತಿಳಿಸಿದರು.

ಒಕ್ಕೂಟಗಳ ಮನವಿ ಮೇರೆಗೆ ತುಪ್ಪದ ದರ ಜಾಸ್ತಿ ಮಾಡಲಾಗಿದೆ. ಹಾಲಿನಲ್ಲೂ ಕೆಲವು ಕಡೆ ನಮಗೆ ನಷ್ಟವಾಗುತ್ತಿದೆ. ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ನೋಡಬೇಕಿದೆ. ನಮಗೆ ಹಾಲು ಉತ್ಪಾದಕರು ಹಾಗೂ ಒಕ್ಕೂಟಗಳು ದರ ಹೆಚ್ಚಳಕ್ಕೆ ಮನವಿ ಮಾಡಿದ್ದಾರೆ. ಹಾಲಿನ ದರ ಏರಿಕೆ ಮಾಡಲು ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

ಸರ್ಕಾರಕ್ಕೆ ನಷ್ಟದ ಬಗ್ಗೆ ತಿಳಿಸಿ ಹಾಲಿನ ದರ ಮತ್ತೆ ಏರಿಕೆ ಮಾಡುವಂತೆ ಮನವಿ ಮಾಡುತ್ತೇವೆ. ಹಾಲಿನ ದರ ಏರಿಕೆ ಮಾಡುತ್ತೇವೆ ಎಂದರೆ ಗಲಾಟೆ ಮಾಡುತ್ತಾರೆ. ಉಳ್ಳವರು ತಿನ್ನುವ ಕಾರಣ ತುಪ್ಪದ ಬೆಲೆ ಏರಿಕೆ ಮಾಡಿದ್ದೇವೆ. ಬೆಣ್ಣೆ ದರವನ್ನು ಏರಿಕೆ ಮಾಡಲು ತಿಳಿಸಿದ್ದೇವೆ. ಬೆಣ್ಣೆ ದರವನ್ನೂ ಪರಿಷ್ಕರಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದರು.

 

 

Share This Article
error: Content is protected !!
";